ಮೈಸೂರು

ಧರ್ಮ ರಕ್ಷಣೆಗಾಗಿ ಜೀವನ ಮುಡುಪಿಟ್ಟ ಶಂಕರಾಚಾರ್ಯರು: ಶ್ರೀವತ್ಸ

ಮೈಸೂರು:  ಶಂಕರಾಚಾರ್ಯರು ವೇದ, ಉಪನಿಷತ್ತು, ವೇದಮಂತ್ರಗಳು, ದೇವರು ಸತ್ಯ ಎನ್ನುವುದನ್ನು ಜನರಲ್ಲಿ ಬಿಂಬಿಸಿ, ದೇಶ ಸಂಚರಿಸುತ್ತಾ ತಮ್ಮ ಜೀವನವನ್ನೇ ಧರ್ಮರಕ್ಷಣೆಗಾಗಿ ಮೀಸಲಿಟ್ಟ ಅವತಾರ ಪುರುಷ ಎಂದು ಶಾಸಕ ಶ್ರೀವತ್ಸ ಬಣ್ಣಿಸಿದರು.

ಇಂದು(ಮೇ.೧೩) ನಗರದ ವಿದ್ಯಾರಣ್ಯಪುರಂನಲ್ಲಿರುವ ಅವನಿ ಶಂಕರಮಠದಲ್ಲಿ ವಿಪ್ರ ಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ  ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯ ಅಂಗವಾಗಿ  ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಶಂಕರಾಚಾರ್ಯರು ತಮ್ಮ ಎಂಟನೇ ವಯಸ್ಸಿನಲ್ಲಿ ಸನ್ಯಾಸತ್ವ ಸ್ವೀಕರಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿ ಸನಾತನ ಹಿಂದೂ ಸಂಸ್ಕೃತಿಯನ್ನು ಮರುಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದರು.

ಮೂಡ ಮಾಜಿ ಅಧ್ಯಕ್ಷ ಎಚ್ ವಿ ರಾಜೀವ್ ಮಾತನಾಡಿ ಶಂಕರಾಚಾರ್ಯರ ಬದುಕನ್ನು ಸಮಚಿತ್ತದಿಂದ ಅವಲೋಕಿಸಿದಾಗ ಮಾತ್ರ ಭಾರತೀಯ ಅಧ್ಯಾತ್ಮಿಕ ಪರಂಪರೆಗೆ ಅವರ ಕೊಡುಗೆ ಏನು ಎಂಬುದು ಅರಿವಾಗುವುದು ಎಂದು ಹೇಳಿದರು.

ಭವ್ಯ ಮೆರವಣಿಗೆ : ಆದಿ ಗುರು ಶ್ರೀ ಶಂಕರಾಚಾರ್ಯರ   ಭಾವಚಿತ್ರವನ್ನು ಅಲಂಕೃತ ವಾಹನದಲ್ಲಿರಿಸಿ ವಿದ್ಯಾರಣ್ಯಪುರಂ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು, ವಿಶೇಷವಾಗಿ ಮಕ್ಕಳು ಬಾಲ ಶಂಕರ ವೇಶವನ್ನು ಧರಿಸಿ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ನಾದಸ್ವರ ಹಾಗೂ ಶಂಕರಾಚಾರ್ಯ ಕೀರ್ತನೆಗಳನ್ನು ಹೇಳುತ್ತಾ ಭಜನೆ, ದೇವರ ನಾಮ, ಸಂಕೀರ್ತಿಗಳನ್ನು ಹಾಡುತ್ತಾ ಮೆರವಣಿಗೆಯಲ್ಲಿ ನೂರಾರು ಭಕ್ಯಾದಿಗಳು ಸಾಗಿದ್ದು ಸಾರ್ವಜನಿಕರ ಗಮನ ಸೆಳೆಯಿತು.

ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ ಟಿ ಪ್ರಕಾಶ್, ಮಾಜಿನಗರ ಪಾಲಿಕಾ ಸದಸ್ಯ ಮಾ ವಿ ರಾಮಪ್ರಸಾದ್, ವಿಪ್ರ ಸಂಗಮ ಅಧ್ಯಕ್ಷ ಡಾಕ್ಟರ್ ಲಕ್ಷ್ಮಿ, ಗ್ರಾಮಾಂತರ ಅಧ್ಯಕ್ಷ ಗೋಪಾಲ್ ರಾವ್, ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ವಿಪ್ರ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಆರ್ ನಾಗರಾಜ್, ಕಾರ್ಯದರ್ಶಿ ಮುಳ್ಳೂರು ಸುರೇಶ್, ಸಹ ಕಾರ್ಯದರ್ಶಿ ಎಚ್ ಸಿ ಮುರುಗೇಶ್, ಖಜಾಂಜಿ ಎಂ ವಿ ಮಂಜುನಾಥ್, ಸುಚಿಂದ್ರ ತೀರ್ಥ, ಶ್ರೀಕಾಂತ್ ಕಶ್ಯಪ್  ಸೇರಿದಂತೆ ಮುಂತಾದವರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

3 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

3 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

3 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

3 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

3 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

3 hours ago