ಮೈಸೂರು

ಚಾಮುಂಡಿ ಗುಡಿಯಲ್ಲಿಲ್ಲ, ಹೋರಾಡುವ ಮಹಿಳೆಯರಲ್ಲಿದ್ದಾಳೆ : ನಾಗಲಕ್ಷ್ಮಿ ಬಣ್ಣನೆ

ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಣ್ಣಿಸಿದರು.

ನಗರದ ಜೆ.ಕೆ.ಮೈದಾನದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ದಸರಾ ಎಂದರೆ ತಾಯಿ ಚಾಮುಂಡೇಶ್ವರಿಯ ಆರಾಧನೆ. ಚಾಮುಂಡೇಶ್ವರಿ ಗುಡಿಯಲಿಲ್ಲ, ನಾಡಿನ ಹೆಣ್ಣಿನ ಅಂತರಂಗದಲ್ಲಿದ್ದಾಳೆ. ಪ್ರತಿಯೊಂದು ಹೆಣ್ಣಿನಲ್ಲೂ ಚಾಮುಂಡಿಯನ್ನು ಕಾಣಲು ಸಾಧ್ಯ ಎಂದರು.

ಇದನ್ನೂ ಓದಿ:-ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ : ಪ್ರಮುಖ ನಿರ್ಣಯ ಹೀಗಿವೆ….

ಸಮಾಜದಲ್ಲಿ ಹಲವು ಮಹಿಳೆಯರಿಗೆ ಸಂಪ್ರದಾಯ, ಸಂಸಾರದ ಸರಪಳಿ ಬಿಗಿದು ಕಟ್ಟಿ ಹಾಕಲಾಗಿದೆ. ಇದರಿಂದ ನಮ್ಮ ಸಮಾಜದಲ್ಲಿ ದೌರ್ಜನ್ಯಕ್ಕೊಳಗಾದ ಎಷ್ಟೋ ಮಹಿಳೆಯರು ತನ್ನ ಅಸ್ತಿತ್ವಕ್ಕಾಗಿ ಧ್ವನಿ ಎತ್ತಲು ಸಾಧ್ಯವಾಗಿಲ್ಲ. ಗಂಡ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡಿದರೂ ಸಮಾಜ ಮಹಿಳೆಯನ್ನು ಹೊಂದಿಕೊಂಡು ಹೋಗುವಂತೆ, ಅನುಸರಿಸಿಕೊಂಡು ಹೋಗುವಂತೆ ಪುಸಲಾಯಿಸುತ್ತಾ ಬಂದಿದೆ. ಇದೆಲ್ಲವನ್ನು ಮೆಟ್ಟಿ ನಿಲ್ಲುವ ಕಾರ್ಯಕ್ಕೆ ಮಹಿಳೆಯರು ಮುಂದಾಗಬೇಕು. ನಮ್ಮದೇ ಆದ ಬದುಕು, ಜೀವನ ಇದೆ. ಅದನ್ನ ನಾವೇ ಮುನ್ನಡೆಸುವಂತಾಗಬೇಕು. ಅನ್ಯಾಯದ ವಿರುದ್ಧ ಹೋರಾಟವಾದರೆ ಮಾತ್ರ ಚಾಮುಂಡೇಶ್ವರಿ ಪ್ರತಿ ಮಹಿಳೆಯ ಪ್ರತಿ ನಿಽಯಾಗಲು ಸಾಧ್ಯ ಎಂದು ಹೇಳಿದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್, ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ಬಸವರಾಜು, ಉಪ ಸಮಿತಿ ಉಪ ವಿಶೇಷಾಽಕಾರಿ ಬಿ.ಎಂ.ಸವಿತಾ, ಶಿಶು ಅಭಿವೃದ್ಧಿ ಯೋಜನಾಽಕಾರಿ ಕೆ.ಎಸ್.ಭವ್ಯಶ್ರೀ, ಶಶಿರೇಖಾ, ಲತಾ ಮೋಹನ್, ಬಿ.ಎಂ.ಸವಿತಾ ಮತ್ತಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

5 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

5 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

5 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

5 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

5 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

5 hours ago