ಮೈಸೂರು : ತನ್ನ ಅಸ್ತಿತ್ವಕ್ಕಾಗಿ, ತನ್ನ ಧ್ವನಿಗಾಗಿ, ತನ್ನ ಮೇಲಾಗುತ್ತಿರುವ ಯಾವುದೇ ಶೋಷಣೆ, ದೌರ್ಜನ್ಯಗಳ ವಿರುದ್ಧ ಹೋರಾಡುವ ಮಹಿಳೆಯಲ್ಲಿ ಚಾಮುಂಡೇಶ್ವರಿ ಸ್ಥಾಪಿತವಾಗಿದ್ದಾಳೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಬಣ್ಣಿಸಿದರು.
ನಗರದ ಜೆ.ಕೆ.ಮೈದಾನದಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮೈಸೂರು ದಸರಾ ಎಂದರೆ ತಾಯಿ ಚಾಮುಂಡೇಶ್ವರಿಯ ಆರಾಧನೆ. ಚಾಮುಂಡೇಶ್ವರಿ ಗುಡಿಯಲಿಲ್ಲ, ನಾಡಿನ ಹೆಣ್ಣಿನ ಅಂತರಂಗದಲ್ಲಿದ್ದಾಳೆ. ಪ್ರತಿಯೊಂದು ಹೆಣ್ಣಿನಲ್ಲೂ ಚಾಮುಂಡಿಯನ್ನು ಕಾಣಲು ಸಾಧ್ಯ ಎಂದರು.
ಇದನ್ನೂ ಓದಿ:-ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ : ಪ್ರಮುಖ ನಿರ್ಣಯ ಹೀಗಿವೆ….
ಸಮಾಜದಲ್ಲಿ ಹಲವು ಮಹಿಳೆಯರಿಗೆ ಸಂಪ್ರದಾಯ, ಸಂಸಾರದ ಸರಪಳಿ ಬಿಗಿದು ಕಟ್ಟಿ ಹಾಕಲಾಗಿದೆ. ಇದರಿಂದ ನಮ್ಮ ಸಮಾಜದಲ್ಲಿ ದೌರ್ಜನ್ಯಕ್ಕೊಳಗಾದ ಎಷ್ಟೋ ಮಹಿಳೆಯರು ತನ್ನ ಅಸ್ತಿತ್ವಕ್ಕಾಗಿ ಧ್ವನಿ ಎತ್ತಲು ಸಾಧ್ಯವಾಗಿಲ್ಲ. ಗಂಡ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡಿದರೂ ಸಮಾಜ ಮಹಿಳೆಯನ್ನು ಹೊಂದಿಕೊಂಡು ಹೋಗುವಂತೆ, ಅನುಸರಿಸಿಕೊಂಡು ಹೋಗುವಂತೆ ಪುಸಲಾಯಿಸುತ್ತಾ ಬಂದಿದೆ. ಇದೆಲ್ಲವನ್ನು ಮೆಟ್ಟಿ ನಿಲ್ಲುವ ಕಾರ್ಯಕ್ಕೆ ಮಹಿಳೆಯರು ಮುಂದಾಗಬೇಕು. ನಮ್ಮದೇ ಆದ ಬದುಕು, ಜೀವನ ಇದೆ. ಅದನ್ನ ನಾವೇ ಮುನ್ನಡೆಸುವಂತಾಗಬೇಕು. ಅನ್ಯಾಯದ ವಿರುದ್ಧ ಹೋರಾಟವಾದರೆ ಮಾತ್ರ ಚಾಮುಂಡೇಶ್ವರಿ ಪ್ರತಿ ಮಹಿಳೆಯ ಪ್ರತಿ ನಿಽಯಾಗಲು ಸಾಧ್ಯ ಎಂದು ಹೇಳಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಡಾ.ಪುಷ್ಪಾ ಅಮರನಾಥ್, ಮಹಿಳಾ ಮತ್ತು ಕಲ್ಯಾಣ ಇಲಾಖೆ ಉಪ ನಿರ್ದೇಶಕ ಬಿ.ಬಸವರಾಜು, ಉಪ ಸಮಿತಿ ಉಪ ವಿಶೇಷಾಽಕಾರಿ ಬಿ.ಎಂ.ಸವಿತಾ, ಶಿಶು ಅಭಿವೃದ್ಧಿ ಯೋಜನಾಽಕಾರಿ ಕೆ.ಎಸ್.ಭವ್ಯಶ್ರೀ, ಶಶಿರೇಖಾ, ಲತಾ ಮೋಹನ್, ಬಿ.ಎಂ.ಸವಿತಾ ಮತ್ತಿತರರು ಉಪಸ್ಥಿತರಿದ್ದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…