ಮೈಸೂರು

ಜನನ, ಮರಣ ಪ್ರಮಾಣ ಪತ್ರಕ್ಕೆ ಹೊಸ ನಿಗಧಿ ದರ ಜಾರಿ: ಶೇಕ್‌ ತನ್ವೀರ್‌ ಆಸೀಫ್‌

ಮೈಸೂರು: ಕೇವಲ 5ರೂ. ಇದ್ದ ಜನನ ಮತ್ತು ಮರಣದ ಪತ್ರ ಇನ್ನೂ ಮುಂದೆ ದುಬಾರಿಯಾಗಿದ್ದು, ಕೇವಲ 25 ರೂಪಾಯಿ ನೀಡಿ 5 ಪ್ರತಿ ಪಡೆಯುತ್ತಿದ್ದ ಸಾರ್ವಜನಿಕರಿಗೆ ದಿಢೀರ್‌ ಬೆಲೆ ಏರಿಕೆಯಿಂದ ಶಾಕ್‌ ನೀಡಿದಂತಾಗಿದೆ.

ಬಸ್, ಪೆಟ್ರೋಲ್, ಡೀಸೆಲ್, ಹಾಲು ದರ ಹೆಚ್ಚಳದ ನಡುವೆ ಜನಸಾಮಾನ್ಯರಿಗೆ ತಮ್ಮ ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆಯಲು ಬೆಲೆ ಏರಿಕೆಯಾಗಿದೆ. ಇದೀಗ ಜನನ ಮತ್ತು ಮರಣ ಪ್ರಮಾಣ ಪತ್ರಕ್ಕೆ 50 ರೂಪಾಯಿಗಳನ್ನು ನಿಗಧಿ ಪಡಿಸಲಾಗಿದೆ. ಈ ನೂತನ ಶುಲ್ಕದ ಪ್ರಕಾರ 5 ಪ್ರತಿಗೆ 250 ರೂ ನಿಗಧಿ ಪಡಿಸಿದ್ದು,
ಒಂದೇ ಬಾರಿಗೆ 10 ಪಟ್ಟು ಶುಲ್ಕವನ್ನು ನಗರಭಿವೃದ್ಧಿ ಇಲಾಖೆ ಹೆಚ್ಚಿಸಿದೆ.

ಮೈಸೂರು ಮಹಾನಗರ ಪಾಲಿಕೆಯಲ್ಲಿ ಇಂದು(ಫೆಬ್ರವರಿ.6) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರು ನಗರಾಭಿವದ್ಧಿ ಇಲಾಖೆ ವತಿಯಿಂದ ಶುಲ್ಕ ಹೆಚ್ಚಳ ಮಾಡಲಾಗಿದೆ. ಕೇವಲ 5 ರೂಪಾಯಿ ಇದ್ದ ಜನನ ಮತ್ತು ಮರಣ ಪತ್ರವನ್ನು ಇದೀಗ 50 ರೂಪಾಯಿ ಶುಲ್ಕ ನಿಗಧಿಯಾಗಿದೆ. ಈ ದರವೂ ಬುಧವಾರದಂದು (ಫೆ.5) ಜಾರಿಯಾಗಿದೆ. ಹೀಗಾಗಿ ಈ ಹಣವನ್ನು ಪಾವತಿಸಿ ಜನನ ಮತ್ತು ಮರಣ ಪತ್ರ ಪಡೆಯಬಹುದಾಗಿದೆ. ಈ ಹೊಸ ನಿಗಧಿತ ದರಕ್ಕೆ ಸಾರ್ವಜನಿಕರು ಸಹಕರಿಸುವಂತೆ ಮಹಾನಗರ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸೀಫ್‌ ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago