ಮೈಸೂರು

ಹೆಮ್ಮರಗಾಲ ಗ್ರಾಮದ ಬೀರೇಶ್ವರಸ್ವಾಮಿ ದೇವಾಲಯದಲ್ಲಿ ಶಿವ ದೀಪೋತ್ಸವ

ನಂಜನಗೂಡು: ಇತಿಹಾಸ ಪ್ರಸಿದ್ಧ ಹೆಮ್ಮರಗಾಲ ಗ್ರಾಮದ ಶ್ರೀ ಬೀರೇಶ್ವರ ಸ್ವಾಮಿ ದೇವಾಲಯದಲ್ಲಿ ಹುಣ್ಣಿಮೆಯ ಅಂಗವಾಗಿ ಶಿವ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್‌ ಹೆಮ್ಮರಗಾಲ ಹಾಗೂ 88 ಗಡಿ ಯಜಮಾನರುಗಳು ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿ ವರ್ಷವೂ ಶಿವ ದೀಪೋತ್ಸವವನ್ನು ಆಚರಣೆ ಮಾಡಿಕೊಂಡು ಬರಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಇಂದು 19ನೇ ವರ್ಷದ ಶಿವ ದೀಪೋತ್ಸವ ಕಾರ್ಯಕ್ರಮವನ್ನು ದೇವಾಲಯದಲ್ಲಿ ಸಡಗರ ಸಂಭ್ರಮದಿಂದ ನೆರವೇರಿತು.

ಕಾಗಿನೆಲೆ ಕನಕ ಗುರು ಪೀಠಾಧ್ಯಕ್ಷರಾದ ಶ್ರೀ ಶಿವಾನಂದಪುರಿ ಮಹಾ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಬೆಳಿಗ್ಗೆ 10.30ರಿಂದ 12 ಗಂಟೆ ಒಳಗೆ ಸಲ್ಲುವ ಶುಭ ಅಮೃತ ಸಿದ್ದಿ ಯೋಗದಲ್ಲಿ ಶ್ರೀ ಬೀರೇಶ್ವರ ಸ್ವಾಮಿಗೆ ಶಿವ ದೀಪೋತ್ಸವದ ಪ್ರಯುಕ್ತ ಶ್ರೀ ಗಣಪತಿ ಪೂಜೆ ಶ್ರೀ ಬೀರೇಶ್ವರ ಸ್ವಾಮಿ ಹಾಗೂ ಶ್ರೀ ಕಾಳಿಕಾಂಬ ಅಮ್ಮನವರ ಹಾಗೂ ಗಣಪತಿ ಉತ್ಸವಗಳಿಗೆ ಹಾಗೂ ನವಗ್ರಹಗಳಿಗೆ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.

ದೇವಾಲಯಕ್ಕೆ ನೂರಾರು ಭಕ್ತರು ಆಗಮಿಸಿ ಶಿವ ದೀಪೋತ್ಸವದಲ್ಲಿ ಭಾಗಿಯಾಗಿ ಪ್ರಸಾದ ಸ್ವೀಕರಿಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

10 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

10 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

10 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

10 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

10 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

13 hours ago