ಪ್ರಶಾಂತ್ ಎನ್.ಮಲ್ಲಿಕ್
ಮೈಸೂರು: ರಾಜ್ಯ ಸರ್ಕಾರವೂ ಸರ್ಕಾರ ನೌಕರರಿಗೆ ಸಂಬಳ ನೀಡದಷ್ಟು ದಿವಾಳಿಯಾಗಿದೆ ಎಂದು ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಏಪ್ರಿಲ್.4) 7ನೇ ವೇತನದ ಹೆಚ್ಚುವರಿ ವೇತನ ಭರಿಸಲು ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಹೆಚ್ಚುವರಿ ವೇತನವನ್ನು ಸ್ಥಳೀಯ ಸಂಸ್ಥೆಗಳ ಆರ್ಥಿಕ ಮೂಲದಿಂದ ಭರಿಸಬೇಕೆಂದು ನಿರ್ದೇಶನ ನೀಡಿದೆ. ಹಾಗಾದರೆ ಯಾವ ಪುರುಷಾರ್ಥಕ್ಕಾಗಿ 7ನೇ ವೇತನ ಜಾರಿ ಮಾಡಬೇಕಿತ್ತು. ಸ್ಥಳೀಯ ಸಂಸ್ಥೆಗಳ ಮೂಲಕ ವೇತನ ಭರಿಸುವುದಾದರೆ, ಸಾರ್ವಜನಿಕರ ಮೇಲೆ ಹೆಚ್ಚಿನ ತೆರಿಗೆ ವಿಧಿಸಬೇಕಾಗುತ್ತದೆ. ಹೀಗಾಗಿ ಸರ್ಕಾರ ಈ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.
ನೌಕರರಿಗೆ ಹೆಚ್ಚುವರಿ ವೇತನ ಕೊಡಲು ಹೆಣಗಾಡುತ್ತಿರುವ ಸರ್ಕಾರವವೂ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಸ್ಥಳೀಯ ಸಂಸ್ಥೆಯಿಂದಲೇ ವೇತನ ಭರಿಸಬೇಕು. ಅಲ್ಲದೇ
ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವ ನೌಕರರ ಹೆಚ್ಚುವರಿ ವೇತನ ಭರಿಸಲು ಸೂಚನೆ ನೀಡಬೇಕು. ಜೊತೆಗೆ ತೆರಿಗೆಯನ್ನು 15ನೇ ಹಣಕಾಸು ಅನುದಾನಗಳಲ್ಲಿ ಭರಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಎಚ್.ಡಿ.ಕೋಟೆ: ತಾಲ್ಲೂಕಿನ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಲು ಶಿಕ್ಷಣಾಧಿಕಾರಿ ಸಿ.ಎನ್.ರಾಜು ಅವರು ಕಾಡಂಚಿನ ಶಾಲೆಗಳಲ್ಲಿ ರಾತ್ರಿ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ತಾಲ್ಲೂಕಿನ ಗಡಿಭಾಗದ…
ನಂಜನಗೂಡು: ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಚರಂಡಿಗಳು ಗಬ್ಬೆದ್ದು ನಾರುತ್ತಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ…
ಓದುಗರ ಪತ್ರ: ಗಾಳಿ... ತಂಗಾಳಿ ! ಚಾಮರಾಜನಗರದ ಶುದ್ಧ ಗಾಳಿಗೆ ದೇಶದಲ್ಲಿ ೪ನೇ ಸ್ಥಾನ ಎಂಥ ಪ್ರಾಣವಾಯು ! ಮಲೆ ಮಾದಪ್ಪ…
ರಾಜ್ಯ ಸರ್ಕಾರ ಮಂಡಿಸಿದ ದ್ವೇಷ ಭಾಷಣ ಮಸೂದೆ ೨೦೨೫ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ವ್ಯಾಪಕ…
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆಯಲ್ಲಿ ಹಲವು ಮಹತ್ವದ ಮಾಹಿತಿಗಳು ಬಯಲಾಗಿವೆ. ಮುಡಾ ಹಗರಣದ…
ಮೈಸೂರಿನ ಬಹುತೇಕ ಭಾಗಗಳಲ್ಲಿ ಪಾದಚಾರಿ ಮಾರ್ಗಗಳನ್ನು ಅಂಗಡಿಯವರು ಒತ್ತುವರಿ ಮಾಡಿಕೊಂಡಿದ್ದಾರೆ. ಇದರಿಂದಾಗಿ ಸಾರ್ವಜನಿಕರು ರಸ್ತೆಯ ಮೇಲೆ ಸಂಚರಿಸುವುದು ಅನಿವಾರ್ಯವಾಗಿದೆ. ನಗರದ…