ಮೈಸೂರು

ರಾಜ್ಯ ಸರ್ಕಾರ, ಸರ್ಕಾರಿ ನೌಕರರಿಗೆ ಸಂಬಳ ನೀಡದಷ್ಟು ದಿವಾಳಿಯಾಗಿದೆ: ಮಾಜಿ ಮೇಯರ್‌ ಶಿವಕುಮಾರ್‌

 

ಪ್ರಶಾಂತ್‌ ಎನ್‌.ಮಲ್ಲಿಕ್‌

ಮೈಸೂರು: ರಾಜ್ಯ ಸರ್ಕಾರವೂ ಸರ್ಕಾರ ನೌಕರರಿಗೆ ಸಂಬಳ ನೀಡದಷ್ಟು ದಿವಾಳಿಯಾಗಿದೆ ಎಂದು ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಏಪ್ರಿಲ್‌.4) 7ನೇ ವೇತನದ ಹೆಚ್ಚುವರಿ ವೇತನ ಭರಿಸಲು ಸರ್ಕಾರ ಸುತ್ತೋಲೆ ಹೊರಡಿಸಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಹೆಚ್ಚುವರಿ ವೇತನವನ್ನು ಸ್ಥಳೀಯ ಸಂಸ್ಥೆಗಳ ಆರ್ಥಿಕ ಮೂಲದಿಂದ ಭರಿಸಬೇಕೆಂದು ನಿರ್ದೇಶನ‌ ನೀಡಿದೆ. ಹಾಗಾದರೆ ಯಾವ ಪುರುಷಾರ್ಥಕ್ಕಾಗಿ 7ನೇ ವೇತನ ಜಾರಿ ಮಾಡಬೇಕಿತ್ತು. ಸ್ಥಳೀಯ ಸಂಸ್ಥೆಗಳ ಮೂಲಕ ವೇತನ ಭರಿಸುವುದಾದರೆ, ಸಾರ್ವಜನಿಕರ ಮೇಲೆ ಹೆಚ್ಚಿನ ತೆರಿಗೆ ವಿಧಿಸಬೇಕಾಗುತ್ತದೆ. ಹೀಗಾಗಿ ಸರ್ಕಾರ ಈ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ನೌಕರರಿಗೆ ಹೆಚ್ಚುವರಿ ವೇತನ ಕೊಡಲು ಹೆಣಗಾಡುತ್ತಿರುವ ಸರ್ಕಾರವವೂ ಇನ್ನು ಮುಂದೆ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಸ್ಥಳೀಯ ಸಂಸ್ಥೆಯಿಂದಲೇ ವೇತನ ಭರಿಸಬೇಕು. ಅಲ್ಲದೇ
ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವವ ನೌಕರರ ಹೆಚ್ಚುವರಿ ವೇತನ ಭರಿಸಲು ಸೂಚನೆ ನೀಡಬೇಕು. ಜೊತೆಗೆ ತೆರಿಗೆಯನ್ನು 15ನೇ ಹಣಕಾಸು ಅನುದಾನಗಳಲ್ಲಿ ಭರಿಸಲು ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು…

25 mins ago

ಮೈಸೂರಿನಿಂದ ಲಕ್ನೋಗೆ ಭವ್ಯ ಪೀಠ : UP ವಿಧಾನಸಭೆಯಲ್ಲಿ ಕರ್ನಾಟಕದ ಕಲಾ ಛಾಪು

ಮೈಸೂರು : ಕರ್ನಾಟಕದ ಕಲಾ-ಶಿಲ್ಪ ಪರಂಪರೆಯು ಮತ್ತೊಮ್ಮೆ ರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಮೈಸೂರಿನ ಖ್ಯಾತ ಕರಕುಶಲ ಶಿಲ್ಪಿ ಕೈಸರ್…

1 hour ago

ಮಾರ್ಚ್‌ನಲ್ಲಿ ಬಜೆಟ್‌ ಮಂಡನೆ : ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಗುರುವಾರದಿಂದ ಬಜೆಟ್ ತಯಾರಿಕೆಯ ಪೂರ್ವಭಾವಿ ಸಭೆಗಳನ್ನು ಆರಂಭಿಸಿದ್ದಾರೆ. ಮಾರ್ಚ್.6ರಂದು ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಅವರು ತಮ್ಮ…

2 hours ago

ಸಾರ್ವಜನಿಕ ಸ್ಥಳದಲ್ಲಿ ಸಿಗರೇಟ್‌ ಸೇದಿ ಫೋಟೋಶೂಟ್:‌ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲು

ಮೈಸೂರು: ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮೈಸೂರಿನ ಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ…

2 hours ago

ಮೆಟ್ರೋ ಪ್ರಯಾಣ ದರ ಏರಿಕೆ: ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥನೆ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು,…

2 hours ago

ಹನೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮುಂದುವರಿದ ಹಸುಗಳ ಮರಣ ಮೃದಂಗ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಹಸುಗಳ ಮರಣ ಮೃದಂಗ ಮುಂದುವರೆದಿದ್ದು ಸಂಬಂಧಪಟ್ಟ ಪಶುಸಂಗೋಪನಾ…

3 hours ago