ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಾಳೆ ನಗರದ್ಯಾದಂತ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಜಿಲ್ಲಾಡಳಿತದಿಂದ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ.
ಜಿಲ್ಲಾಡಳಿತ ಖಜಾನೆಯಿಂದ ಇಂದು(ಫೆಬ್ರವರಿ.25) ಅರಮನೆ ಆವರಣದ ಆಡಳಿತ ಮಂಡಳಿಗೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ. ಇದನ್ನು ನಾಳೆ(ಫೆ.26) ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತ್ರೀನೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ ಬಳಿಕ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ.
ಮೈಸೂರು ಸಂಸ್ಥಾನದ ಅಂದಿನ ಅರಸ ಜಯಚಾಮರಾಜೇಂದ್ರ ಒಡೆಯರ್ ಅವರು ಈ ಚಿನ್ನದ ಕೊಳಗವನ್ನು 1952 ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ಹುಟ್ಟಿದ ನೆನಪಿನಾರ್ಥ ತ್ರೀನೇಶ್ವರ ದೇವಾಲಯಕ್ಕೆ ಕೊಡುಗೆ ನೀಡಿರುವ ಚಿನ್ನದ ಮುಖವಾಡವಾಗಿದೆ. ಈ ಚಿನ್ನದ ಕೊಳಗ ಸುಮಾರು 11 ಕೆ.ಜಿ. ಇದೆ. ಇದನ್ನು ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನದಂದು ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಹೀಗಾಗಿ ತ್ರೀನೇಶ್ವರ ದೇವಾಲಯಕ್ಕೆ ನಾಳೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…
ರಾಜ್ಯದಲ್ಲಿ ನಕಲಿ ಔಷಧಗಳ ಜಲವು ನಾಗರಿಕರ ಪ್ರಾಣದೊಂದಿಗೆ ಚೆಟವಾಡುತ್ತಿರುವುದು ತೀವ್ರ ಆತಂಕಕಾರಿ ಮತ್ತು ಅಕ್ಷಮ್ಯ. ತನಿಖೆಯಲ್ಲಿ ಸುಮಾರು ೩,೫೦೦ ಔಷಧ…
ಮಡಿಕೇರಿ: ಮೋಡ ಬಿತ್ತನೆಯ ಚರ್ಚೆಯ ನಡುವೆಯೇ ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಿದೆ. ನಿನ್ನೆ ರಾತ್ರಿಯಿಂದ ಜಿಲ್ಲೆಯ ಹಲವೆಡೆ…
ಡಾ.ರಘುಪತಿ ಮಹದೇಶ್ವರ ಬೆಟ್ಟಕ್ಕೆ ಹೋಗುವಾಗ ಹನೂರು ದಾಟಿದರೆ ನಿಮಗೆ ದೊಡ್ಡಿ ಹೆಸರಿನ ಹಲವು ಹಳ್ಳಿಗಳು ಸಿಗುತ್ತವೆ. ಹಾಗೆಯೇ ನೂರಾರು ದನಗಳೂ,ಅದೂ…