ಮೈಸೂರು

ಶಿವರಾತ್ರಿ ಸಂಭ್ರಮ: ಜಿಲ್ಲಾಡಳಿತದಿಂದ ಚಿನ್ನದ ಕೊಳಗ ಅರಮನೆಗೆ ಹಸ್ತಾಂತರ

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ನಾಳೆ ನಗರದ್ಯಾದಂತ ಶಿವರಾತ್ರಿ ಹಬ್ಬದ ಸಂಭ್ರಮವಾಗಿದ್ದು, ಜಿಲ್ಲಾಡಳಿತದಿಂದ ಮೈಸೂರಿನ ಅರಮನೆ ಆವರಣದಲ್ಲಿರುವ ತ್ರೀನೇಶ್ವರ ಸ್ವಾಮಿ ದೇವಾಲಯಕ್ಕೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ.

ಜಿಲ್ಲಾಡಳಿತ ಖಜಾನೆಯಿಂದ ಇಂದು(ಫೆಬ್ರವರಿ.25) ಅರಮನೆ ಆವರಣದ ಆಡಳಿತ ಮಂಡಳಿಗೆ ಚಿನ್ನದ ಕೊಳಗ ಹಸ್ತಾಂತರ ಮಾಡಲಾಗಿದೆ. ಇದನ್ನು ನಾಳೆ(ಫೆ.26) ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ತ್ರೀನೇಶ್ವರ ದೇವಸ್ಥಾನದ ಶಿವಲಿಂಗಕ್ಕೆ ಅಭಿಷೇಕ ಮಾಡಿ ಪೂಜೆ ಸಲ್ಲಿಸಿದ ಬಳಿಕ ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ.

ಮೈಸೂರು ಸಂಸ್ಥಾನದ ಅಂದಿನ ಅರಸ ಜಯಚಾಮರಾಜೇಂದ್ರ ಒಡೆಯರ್‌ ಅವರು ಈ ಚಿನ್ನದ ಕೊಳಗವನ್ನು 1952 ರಲ್ಲಿ ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್‌ ಹುಟ್ಟಿದ ನೆನಪಿನಾರ್ಥ ತ್ರೀನೇಶ್ವರ ದೇವಾಲಯಕ್ಕೆ ಕೊಡುಗೆ ನೀಡಿರುವ ಚಿನ್ನದ ಮುಖವಾಡವಾಗಿದೆ. ಈ ಚಿನ್ನದ ಕೊಳಗ ಸುಮಾರು 11 ಕೆ.ಜಿ. ಇದೆ. ಇದನ್ನು ಪ್ರತಿ ವರ್ಷ ಶಿವರಾತ್ರಿ ಹಬ್ಬದ ದಿನದಂದು ಶಿವಲಿಂಗಕ್ಕೆ ಧಾರಣೆ ಮಾಡಲಾಗುತ್ತದೆ. ಹೀಗಾಗಿ ತ್ರೀನೇಶ್ವರ ದೇವಾಲಯಕ್ಕೆ ನಾಳೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದಾರೆ.

ಅರ್ಚನ ಎಸ್‌ ಎಸ್

Recent Posts

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

5 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

7 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

8 hours ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

9 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

11 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

11 hours ago