ಮೈಸೂರು

ಪಿಎಚ್‌.ಡಿ ಮಾರ್ಗದರ್ಶಕರ ಕೊರತೆ : 3ನೇ ದಿನಕ್ಕೆ ಕಾಲಿಟ್ಟ ಧರಣಿ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ವಿದ್ಯಾನಿಲಯದ ಕ್ರಾಫಡ್‌ ಭವನ ಮುಂಭಾಗ ನಡೆಯುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಬೇಡಿಕೆ ಈಡೇರಿಸುವವಗೆರೆ ಧರಣಿ ಮುಂದುವರಿಸಲಾಗುವುದು. ವಿ.ವಿ ಆಡಳಿತ ವಿಳಂಬ ಧೋರಣೆ ಅನುಸರಿಸಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಎಚ್ಚರಿಸಿ, ಆಕ್ರೋಶ ಹೊರಹಾಕಿದ್ದಾರೆ.

ಮೈಸೂರು ವಿ.ವಿಯಲ್ಲಿ ಖಾಯಂ ಪ್ರಧ್ಯಾಪಕರ ಕೊರತೆಯಿಂದಾಗಿ ಸಂಶೋಧನೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಹೀಗಾಗಿ, ಸಂಶೋಧನಾ ಆಕಾಂಕ್ಷೆ ಉಳ್ಳ ವಿದ್ಯಾರ್ಥಿಗಳು ಬೀದಿ ಪಾಲಾಗಿದ್ದಾರೆ. ಈಗಾಗಲೇ ಇರುವಂತ ಖಾಯಂ ಪ್ರಾಧ್ಯಾಪಕರ ಬಳಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಸಂಶೋಧನಾ ಪ್ರವೇಶಾತಿ ಪಡೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ನ್ಯಾಯಯುತ ಬೇಡಿಕೆ ;
ಈ ನಡುವೆ ಪೊಲೀಸರು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೂ ಮಾತಿನ ಚಕಮಕಿ ನಡೆಯಿತು. ವಿ.ವಿ ಕುಲಪತಿ ನಮ್ಮ ಮನವಿಯನ್ನು ಸ್ವೀಕರಿಸಲೇಬೇಕು. ನಮ್ಮದು ನ್ಯಾಯಯುತ ಬೇಡಿಕೆ ಎಂದು ಪಟ್ಟು ಹಿಡಿದರು.

ಇನ್ನಷ್ಟು ಓದಿ : ಪಿಎಚ್‌.ಡಿ ಮಾರ್ಗದರ್ಶಕರ ಕೊರತೆ : ಮೈಸೂರು ವಿವಿ ವಿರುದ್ಧ ಅಹೋರಾತ್ರಿ ಧರಣಿ 

ಸಾಕಷ್ಟು ಅರ್ಹತೆ, ಸಾಮರ್ಥ್ಯ ಇದ್ದರೂ ಸಂಶೋಧನೆಗೆ ಅವಕಾಶ ಸಿಗದೆ ಬೀದಿ ಪಾಲಾಗಿದ್ದೇವೆ. ನಮಗೆ ವಿ.ವಿ ಪರ್ಯಾಯ ವ್ಯವಸ್ಥೆ ಮಾಡಿಕೊಡಲೇಬೇಕು ಅಲ್ಲಿಯವರೆಗೂ ನಾವು ಪ್ರತಿಭಟನಾ ಧರಣಿಯಿಂದ ಹಿಂದೆ ಸರಿಯಲ್ಲ ಎಂದು ಪಟ್ಟು ಹಿಡಿದು ಧರಣಿ ಕುಳಿತಿದ್ದಾರೆ.

ಎಐಡಿಎಸ್‌ಒ ಬೆಂಬಲ ;
ಹೆಚ್ಚುವರಿ ಸಂಶೋಧನಾ ಮಾರ್ಗದರ್ಶನಕ್ಕಾಗಿ ಪ್ರತಿಭಟನೆ ಮಾಡುತ್ತಿರುವ ಸಂಶೋಧನಾ ಆಕಾಂಕ್ಷಿಗಳ ಹೋರಾಟಕ್ಕೆ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ಬೆಂಬಲ ಸೂಚಿಸಿದೆ.

ಇನ್ನಷ್ಟು ಓದಿ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ; FIR ದಾಖಲು

ದಲಿತ ಸಂಘರ್ಷ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮಹದೇವು, ಸಂಶೋಧನಾ ವಿದ್ಯಾರ್ಥಿ ಪ್ರದೀಪ್ ಮುಮ್ಮಡಿ, ಸಂಶೋಧನಾ ಆಕಾಂಕ್ಷಿಗಳಾದ ಮಹೇಶ್, ರೋಹನ್, ನವೀನ್‌ ಅಳಗಂಜಿ, ನಂದೀಶ್‌, ಕರ್ಣ, ರವಿ, ರೋಜಾ, ರಂಗನಾಥ್‌, ಕಿರಣ್‌, ಹೃತಿಕ್‌, ಸುರೇದ್ರ ಸೇರಿದಂತೆ ಮತ್ತಿತರರು  ಪಾಲ್ಗೊಂಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

3 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

3 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

7 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

7 hours ago

ಓದುಗರ ಪತ್ರ: ಪರಸ್ಪರ ಗೌರವಕ್ಕೆ ಮತ್ತೊಮ್ಮೆ ಕನ್ನಡಿ

ದೇಶದ ೮೦ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಕ್ಷಣಗಳಲ್ಲಿ, ವಿಶ್ವದ ಅತಿ ಎತ್ತರದ ಕಟ್ಟಡವಾದ ದುಬೈನ ‘ಬುರ್ಜ್ ಖಲೀಫಾ’ದಲ್ಲಿ ಭಾರತದ ತ್ರಿವರ್ಣ…

7 hours ago

ನಡೆಯದ ಸಂಸತ್ ಕಲಾಪ; ಕುಗ್ಗಿದ ಮೋದಿ-ಶಾ ವರ್ಚಸ್ಸು

ದೆಹಲಿ ಕಣ್ಣೋಟ ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು…

7 hours ago