ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿಂದ ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ. ಹೀಗಾಗಿ, ಹೆಚ್ಚುವರಿ ಪಿಎಚ್.ಡಿ ವಿದ್ಯಾರ್ಥಿಗಳನ್ನು ದಾಖಲಾತಿ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ವಿಶ್ವ ವಿದ್ಯಾನಿಲಯದ ಕ್ರಾಫಡ್ ಭವನ ಮುಂಭಾಗ ನಡೆಯುತ್ತಿರುವ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ.
ಬೇಡಿಕೆ ಈಡೇರಿಸುವವಗೆರೆ ಧರಣಿ ಮುಂದುವರಿಸಲಾಗುವುದು. ವಿ.ವಿ ಆಡಳಿತ ವಿಳಂಬ ಧೋರಣೆ ಅನುಸರಿಸಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಪ್ರತಿಭಟನಾನಿರತ ವಿದ್ಯಾರ್ಥಿಗಳು ಎಚ್ಚರಿಸಿ, ಆಕ್ರೋಶ ಹೊರಹಾಕಿದ್ದಾರೆ.
ಮೈಸೂರು ವಿ.ವಿಯಲ್ಲಿ ಖಾಯಂ ಪ್ರಧ್ಯಾಪಕರ ಕೊರತೆಯಿಂದಾಗಿ ಸಂಶೋಧನೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಹೀಗಾಗಿ, ಸಂಶೋಧನಾ ಆಕಾಂಕ್ಷೆ ಉಳ್ಳ ವಿದ್ಯಾರ್ಥಿಗಳು ಬೀದಿ ಪಾಲಾಗಿದ್ದಾರೆ. ಈಗಾಗಲೇ ಇರುವಂತ ಖಾಯಂ ಪ್ರಾಧ್ಯಾಪಕರ ಬಳಿ ಹೆಚ್ಚಿನ ವಿದ್ಯಾರ್ಥಿಗಳಿಗೆ ಸಂಶೋಧನಾ ಪ್ರವೇಶಾತಿ ಪಡೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ನ್ಯಾಯಯುತ ಬೇಡಿಕೆ ;
ಈ ನಡುವೆ ಪೊಲೀಸರು ಹಾಗೂ ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೂ ಮಾತಿನ ಚಕಮಕಿ ನಡೆಯಿತು. ವಿ.ವಿ ಕುಲಪತಿ ನಮ್ಮ ಮನವಿಯನ್ನು ಸ್ವೀಕರಿಸಲೇಬೇಕು. ನಮ್ಮದು ನ್ಯಾಯಯುತ ಬೇಡಿಕೆ ಎಂದು ಪಟ್ಟು ಹಿಡಿದರು.
ಇನ್ನಷ್ಟು ಓದಿ : ಪಿಎಚ್.ಡಿ ಮಾರ್ಗದರ್ಶಕರ ಕೊರತೆ : ಮೈಸೂರು ವಿವಿ ವಿರುದ್ಧ ಅಹೋರಾತ್ರಿ ಧರಣಿ
ಸಾಕಷ್ಟು ಅರ್ಹತೆ, ಸಾಮರ್ಥ್ಯ ಇದ್ದರೂ ಸಂಶೋಧನೆಗೆ ಅವಕಾಶ ಸಿಗದೆ ಬೀದಿ ಪಾಲಾಗಿದ್ದೇವೆ. ನಮಗೆ ವಿ.ವಿ ಪರ್ಯಾಯ ವ್ಯವಸ್ಥೆ ಮಾಡಿಕೊಡಲೇಬೇಕು ಅಲ್ಲಿಯವರೆಗೂ ನಾವು ಪ್ರತಿಭಟನಾ ಧರಣಿಯಿಂದ ಹಿಂದೆ ಸರಿಯಲ್ಲ ಎಂದು ಪಟ್ಟು ಹಿಡಿದು ಧರಣಿ ಕುಳಿತಿದ್ದಾರೆ.
ಎಐಡಿಎಸ್ಒ ಬೆಂಬಲ ;
ಹೆಚ್ಚುವರಿ ಸಂಶೋಧನಾ ಮಾರ್ಗದರ್ಶನಕ್ಕಾಗಿ ಪ್ರತಿಭಟನೆ ಮಾಡುತ್ತಿರುವ ಸಂಶೋಧನಾ ಆಕಾಂಕ್ಷಿಗಳ ಹೋರಾಟಕ್ಕೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಬೆಂಬಲ ಸೂಚಿಸಿದೆ.
ಇನ್ನಷ್ಟು ಓದಿ : ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ವಿರುದ್ದ ಅತ್ಯಾಚಾರ ಆರೋಪ ; FIR ದಾಖಲು
ದಲಿತ ಸಂಘರ್ಷ ಸಮಿತಿಯ ಸಂಚಾಲಕ ಚೋರನಹಳ್ಳಿ ಶಿವಣ್ಣ, ಮಹದೇವು, ಸಂಶೋಧನಾ ವಿದ್ಯಾರ್ಥಿ ಪ್ರದೀಪ್ ಮುಮ್ಮಡಿ, ಸಂಶೋಧನಾ ಆಕಾಂಕ್ಷಿಗಳಾದ ಮಹೇಶ್, ರೋಹನ್, ನವೀನ್ ಅಳಗಂಜಿ, ನಂದೀಶ್, ಕರ್ಣ, ರವಿ, ರೋಜಾ, ರಂಗನಾಥ್, ಕಿರಣ್, ಹೃತಿಕ್, ಸುರೇದ್ರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…
ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…
ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…
ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…
ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…
ಕೆ.ಬಿ.ರಮೇಶನಾಯಕ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿಗೆ ಸಹಕಾರಿ; ಸ್ಥಳೀಯ ಉತ್ಪನ್ನಗಳ ಮಾರಾಟ, ಆದಾಯ, ಆರೋಗ್ಯ ವೃದ್ಧಿ ಮೈಸೂರು: ಜಗತ್ತಿಗೆ ಯೋಗವನ್ನು ಪರಿಚಯಿಸಿಕೊಡುವ…