ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಕ್ಷೇತ್ರದ ಮೂಗೂರು ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿ ಕೊರತೆಯಿಂದ ಪೊಲೀಸ್ ಠಾಣೆಗೆ ಬೀಗ ಹಾಕಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮೂಗೂರು ಗ್ರಾಮ ದೊಡ್ಡ ಹೋಬಳಿ ಕೇಂದ್ರವಾಗಿದ್ದು, 40 ವರ್ಷಗಳ ಹಿಂದೆ ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ತೆರೆಯಲಾಗಿದ್ದ ಉಪ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿ ಕೊರತೆಯಿಂದಾಗಿ ಪೊಲೀಸ್ ಠಾಣೆಗೆ ಬೀಗ ಹಾಕಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸಚಿವ ಎಚ್.ಸಿ.ಮಹದೇವಪ್ಪ ಪ್ರತಿನಿಧಿಸುವ ಮೂಗೂರು ಕ್ಷೇತ್ರದ ಉಪ ಪೊಲೀಸ್ ಠಾಣೆಯಲ್ಲಿ ಪ್ರಸ್ತುತ ಒಬ್ಬ ಮುಖ್ಯ ಪೇದೆ ಹಾಗೂ ಒಬ್ಬ ಪೇದೆ ಮಾತ್ರ ಈ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಈ ಇಬ್ಬರೂ ಸಿಬ್ಬಂದಿ ಬೇರೆ ಕಡೆಗೆ ಬಂದೋಬಸ್ತ್ ಕೆಲಸಕ್ಕಾಗಿ ನಿಯೋಜನೆಗೊಂಡಿದ್ದಾರೆ. ಈ ಮಧ್ಯೆ ಪೊಲೀಸ್ ಠಾಣೆಗೆ ಸಿಬ್ಬಂದಿ ನೇಮಕ ಮಾಡಿ. ಈ ಗ್ರಾಮಕ್ಕೆ ಪೊಲೀಸ್ ಠಾಣೆ ಇರಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…
ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…
ವೈದ್ಯರು ಮೊಬೈಲ್ ಟಾರ್ಚ್ ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…
ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…