ಮೈಸೂರು

ಬರಸಂಕಷ್ಟಕ್ಕೆ ಸ್ಪಂದಿಸದ ಬಿಜೆಪಿಯವರಿಗೆ ಜನರು ಮತ ನೀಡಬೇಕೆ : ಸಿಎಂ ಪ್ರಶ್ನೆ !

  • ಕೇಂದ್ರದ ಬಿಜೆಪಿ ಸರ್ಕಾರ ತೆರಿಗೆ ಪಾಲು ನೀಡದೇ ಕನ್ನಡಿಗರಿಗೆ ದ್ರೋಹವೆಸಗಿದೆ.
  • ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ.
  • ಅಕ್ರಮ ಗಣಿಗಾರಿಕೆ: ಸಚಿವರ ವಿರುದ್ಧ ವರದಿ ಬಂದಿಲ್ಲ : ಸಿಎಂ

ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ. ಇಂತಹ ಬಿಜೆಪಿಯವರಿಗೆ ಜನರು ಮತ ನೀಡಬೇಕೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ರಾಜ್ಯದ ತೆರಿಗೆ ಹಣದಲ್ಲಿ ರಾಜ್ಯಕ್ಕೆ ಪಾಲು ನೀಡುತ್ತಿಲ್ಲ. ಆದರೆ ಮಾಜಿ ಮುಖ್ಯಮಂತ್ರಿ ಈ ಬಗ್ಗೆ ಚಕಾರವೆತ್ತದೇ, ಬಿಜೆಪಿಯ ವಕ್ತಾರರಾಗಿಬಿಟ್ಟಿದ್ದಾರೆ ಎಂದರು.

ಕೇಂದ್ರದ ಈ ಧೋರಣೆ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹ. ಬಿಜೆಪಿಯವರ ಈ ಧೋರಣೆಗೆ ರಾಜ್ಯದ ಜನರು ತಕ್ಕ ಪಾಠ ಕಲಿಸುತ್ತಾರೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರ ಕೈಗೊಳ್ಳುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹೈಲೆಪಲ್ ಕಮಿಟಿ ಅಧ್ಯಕ್ಷರಾಗಿರುವ ಅಮಿತ್ ಶಾ ಅವರು ಬರಪರಿಹಾರಕ್ಕೆ ಸಮ್ಮತಿ ಸೂಚಿಸಿಲ್ಲ.

ಮೇಕೆದಾಟು ಯೋಜನೆ, ಮಹದಾಯಿ ಯೋಜನೆಗೂ ಇದುವರೆಗೆ ಅನುಮತಿ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.

ಅಮಿತ್ ಶಾ ವಿರುದ್ಧ ನೀಡಿದ ಹೇಳಿಕೆಗಾಗಿ ಚುನಾವಣಾ ಆಯೋಗದಿಂದ ನೋಟೀಸ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಚುನಾವಣಾ ಆಯೋಗ ನೀಡಿರುವ ನೋಟೀಸ್ ಗೆ ಉತ್ತರ ನೀಡಲಾಗಿದೆ.

ಸಿಬಿಐ ನವರು ನೀಡಿರುವ ವರದಿಯ ಮೇಲೆ ಅವರು ಹೇಳಿಕೆಯನ್ನು ನೀಡಿದ್ದು, ಈ ಬಗ್ಗೆ ಸ್ಪಷ್ಟೀಕರಣವನ್ನು ಈಗಾಗಲೇ ನೀಡಿದ್ದೇನೆ ಎಂದರು.

ಕಾಂಗ್ರೆಸ್ ಸರ್ಕಾರದ ಸಾಧನೆಗಳ ಮೇಲೆ ಚುನಾವಣೆ : ವರುಣಾ ಕ್ಷೇತ್ರದ ಮುಖ್ಯಮಂತ್ರಿಗಳ ನಿನ್ನೆಯ ಪ್ರಚಾರ ಭಾಷಣದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಜನಪರ ಯೋಜನೆಗಳು ,ಅಭಿವೃದ್ಧಿ ಕಾರ್ಯಗಳು ಮುಂದುವರೆಯಬೇಕಾದರೆ ನಮ್ಮ ಸರ್ಕಾರವೇ ಅಸ್ತಿತ್ವದಲ್ಲಿರಬೇಕು. ಬಿಜೆಪಿಯವರು ಅಧಿಕಾರಕ್ಕೆ ಬಂದಲ್ಲಿ, ಜನಪರ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂದು ಜನರಿಗೆ ಮನವರಿಕೆ ಮಾಡಿಸಿದ್ದೇನೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ.ಕಾಂಗ್ರೆಸ್ ಸರ್ಕಾರ ಮಾಡಿರುವ ಸಾಧನೆಗಳ ಆಧಾರದ ಮೇಲೆ ಮತ ಕೇಳುತ್ತಿದ್ದು, ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲಿದ್ದಾರೆ ಎಂಬ ಭರವಸೆಯಿದೆ ಎಂದರು.

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ : ರಾಜ್ಯದಲ್ಲಿ ಬರದಿಂದ ನೀರಿನ ಸಮಸ್ಯೆ ಹೆಚ್ಚಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಮಾಧ್ಯಮಗಳು ಊಹಾಪೋಹಗಳ ಮೇಲೆ ವರದಿ ಮಾಡಬಾರದು. ರಾಜ್ಯದ ಯಾವುದೇ ಭಾಗದಲ್ಲಿಯೂ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದರು.

ಅಕ್ರಮ ಗಣಿಗಾರಿಕೆ: ಸಚಿವರ ವಿರುದ್ಧ ವರದಿ ಬಂದಿಲ್ಲ! ಶಾಸಕ ಜನಾರ್ಧನ ರೆಡ್ಡಿಯವರು ಸಚಿವರಾದ ಸಂತೋಷ್ ಲಾಡ್ ಹಾಗೂ ನಾಗೇಂದ್ರ ಅವರ ಮೇಲೆ ಅಕ್ರಮ ಗಣಿಗಾರಿಕೆ ಆರೋಪದ ಕುರಿತು ಟೀಕಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,ಅಕ್ರಮ ಗಣಿಗಾರಿಕೆ ನಡೆಸಿರುವ ಬಗ್ಗೆ ಸಾಕ್ಷ್ಯಧಾರಗಳಿದ್ದರೆ ನ್ಯಾಯಾಯಲದ ಮೊರೆ ಹೋಗಬೇಕು. ಜನಾರ್ಧನ ರೆಡ್ಡಿಯವರು ಅಕ್ರಮಗಣಿಗಾರಿಕೆಯಲ್ಲಿ ತೊಡಗಿದ್ದರು ಎಂದು ವರದಿಯಲ್ಲಿ ಬಂದ ಕಾರಣದಿಂದಾಗಿ, ನಾನು ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಹೋರಾಟ ಮಾಡಿ, ಪಾದಯಾತ್ರೆ ಕೈಗೊಂಡಿದ್ದೆ. ಈ ರೀತಿಯ ಯಾವ ವರದಿಗಳು ಈ ಸಚಿವರ ಮೇಲೆ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು.

ಹಾಸನದಲ್ಲಿ ಕಾಂಗ್ರೆಸ್ ಪರ ಜನರ ಒಲವು : ಮಂಡ್ಯದಲ್ಲಿ ಕುಮಾರಸ್ವಾಮಿಯವರು ಚುನಾವಣೆ ಎದುರಿಸುತ್ತಿರುವುದು ದೈವೇಚ್ಛೆ ಎಂದ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಅವರ ಮಗನನ್ನು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಲ್ಲಿಸಿ ಸೋಲನ್ನು ಅನುಭವಿಸಿದರು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ನಾನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಿದ್ದರಿಂದ ಅವರು ಹಾಸನದಲ್ಲಿ ಗೆಲುವನ್ನು ಸಾಧಿಸಿದರು. ಈ ಬಾರಿ ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲೇ ಬೇಕೆಂದು ಕಾರ್ಯಪ್ರವೃತ್ತರಾಗಿದ್ದು, ಹಾಸನದ ಜನತೆ ಕಾಂಗ್ರೆಸ್ ಪಕ್ಷದತ್ತ ಒಲವು ತೋರಿದ್ದಾರೆ ಎಂದರು.

ಯಾವುದೇ ಆತಂಕ ಇಲ್ಲ : ವರುಣಾ ಜನರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಬಯಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಾರಿಯ ನನ್ನ ಸರ್ಕಾರದ ಅವಧಿಯೇ ನಾಲ್ಕು ವರ್ಷವಿದೆ. ನನ್ನ 82 ನೇಯ ವಯಸ್ಸಿಗೆ ನನ್ನ ರಾಜಕೀಯ ಜೀವನಕ್ಕೆ 50 ವರ್ಷವಾಗುತ್ತದೆ. ಚುನಾವಣೆಯ ಬಗ್ಗೆ ಯಾವುದೇ ರೀತಿಯ ಆತಂಕವಿಲ್ಲ ಎಂದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಕ್ಕಳ ಸಂಕಷ್ಟಕ್ಕೆ ಎಣೆಯಿಲ್ಲ

ಚಿರಂಜೀವಿ ಸಿ. ಹುಲ್ಲಹಳ್ಳಿ  ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…

37 mins ago

ಬೀದಿ ನಾಯಿಗಳ ಹಾವಳಿ; ಬಸವಳಿದ ಜನತೆ

ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…

46 mins ago

ದರೋಡೆಗೆ ಪ್ರಶಸ್ತವಾಯಿತೇ ಬೈಪಾಸ್?

ಹೇಮಂತ್‌ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…

53 mins ago

ಹನೂರು| ಮೇಕೆ ಮೇಲೆ ಚಿರತೆ ದಾಳಿ: ಸ್ಥಳೀಯರಲ್ಲಿ ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…

13 hours ago

ಮಲೆ ಮಹದೇಶ್ವರನ ಹುಂಡಿಯಲ್ಲಿ 2.16 ಕೋಟಿ ರೂ. ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…

13 hours ago