ಮೈಸೂರು : ರೈತ ಆತ್ಮಹತ್ಯೆ ಸಂಬಂಧ ಜಿಲ್ಲೆಯಲ್ಲಿ ಎಲ್ಲಾ 65 ಪ್ರಕರಣಗಳು ಇತ್ಯರ್ಥವಾಗಿದ್ದು ಅಧಿಕಾರಿಗಳು ರೈತರ ಕುಟುಂಬದ ಶ್ರೇಯೋಭಿವೃದ್ಧಿಗಾಗಿ ಸೇವೆ ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಪಿ.ಶಿವರಾಜು ಅವರು ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ರೈತರ ಆತ್ಮಹತ್ಯೆ ಸಂಬಂಧ ನಡೆದ ಜಿಲ್ಲಾ ಉಸ್ತುವಾರಿ ಸಮಿತಿಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರೈತ ಆತ್ಮಹತ್ಯೆ ಪ್ರಕರಣ ಕಂಡುಬಂದ 24 ಗಂಟೆಯ ಒಳಗೆ ಆಯಾ ತಾಲೂಕಿನ ತಹಶೀಲ್ದಾರ್ ಹಾಗೂ ಸಮಿತಿಯವರು ಆ ಸ್ಧಳಕ್ಕೆ ಭೇಟಿ ಮಾಡಿ ವರದಿ ನೀಡಬೇಕು. ಇಲ್ಲದಿದ್ದರೆ ಸಂಬಂಧ ಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದರು.
ರೈತ ಕುಟುಂಬಕ್ಕೆ ಸಿಗಬೇಕಾದ ಸರ್ಕಾರದ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು. ಆತ್ಮಹತ್ಯೆಗೆ ಶರಣಾದ ರೈತರ ಕುಟುಂಬಕ್ಕೆ ವಿಶೇಷ ಸೌಲಭ್ಯಗಳನ್ನು ನೀಡಬೇಕು ಹಾಗೂ ಆತ್ಮಹತ್ಯೆಗೆ ಶರಣಾದ ಅರ್ಹ ರೈತ ಕುಟುಂಬಕ್ಕೆ ನೀಡಲಾಗುತ್ತಿರುವ ವಿಶೇಷ ಸೌಲಭ್ಯಗಳಾದ ಮೃತ ರೈತರ ಪತ್ನಿಗೆ 2000 ರೂ.ಗಳ ಮಾಸಾಶನ, ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ ಸೌಲಭ್ಯ ಹಾಗೂ ಆತ್ಮಹತ್ಯೆ ಮಾಡಿಕೊಂಡು ಮೃತರಾದ ರೈತರ ಕುಟುಂಬಗಳಗೆ ವಿಶೇಷ ಆರೋಗ್ಯ ಯೋಜನೆಗಳ ಸೌಲಭ್ಯಗಳು ದೊರೆಯುವಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದರು.
ಸಭೆಯಲ್ಲಿ ಹೆಚ್ಚುವರಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ, ಜಿಲ್ಲಾ ಸಹಕಾರ ನಿಬಂಧಕರು,ಜಿಲ್ಲಾ ವೈಧ್ಯಾಧಿಕಾರಿಗಳು,ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…