ಬೆಂಗಳೂರು: ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್ ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.
ಬ್ಯಾಂಕ್ನ 28 ನೇ ಸರ್ವ ಸದಸ್ಯರ ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ಧ್ವಾರಕನಾಥ್ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಕಳೆದ ವರ್ಷ ಬ್ಯಾಂಕ್ 2.85 ಕೋಟಿ ರೂಪಾಯಿ ಲಾಭಗಳಿಸಿತ್ತು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಮಾತನಾಡಿದ ಬಿ.ವಿ.ಧ್ವಾರಕನಾಥ್, ಸಹಕಾರಿ ವಲಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಗ್ರಾಹಕರ ಹಿತರಕ್ಷಣೆಗೆ ಒತ್ತು ನೀಡಿರುವ ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಗ್ರಾಹಕ ಸ್ನೇಹಿ ಜೊತೆಗೆ ಆರ್ಥಿಕ ಶಿಸ್ತಿಗೆ ಒತ್ತು ನೀಡಲಾಗುವುದು. ಆರ್ಬಿಐ ನಿಂದ ಬ್ಯಾಂಕಿಗೆ ಸೂಕ್ತ ರೀತಿಯಲ್ಲಿ ಮನ್ನಣೆ ದೊರೆತಿದ್ದು, ಇದನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಬ್ಯಾಂಕಿನ ಗ್ರಾಹಕ ಹಾಗೂ ಚಲನಚಿತ್ರ ನಿರ್ಮಾಪಕ ಬಿ.ಕೆ ಶ್ರೀನಿವಾಸ್ (ನಿರ್ಮಾಪಕ ಬೆಂಕೋಶ್ರಿ) ಮಾತನಾಡಿ, ಬ್ಯಾಂಕ್ ನಲ್ಲಿ ಗ್ರಾಹಕರ ರಕ್ಷಣೆ ಜೊತೆಗೆ ಉತ್ತಮ ಆಡಳಿತದ ಕಾರಣಕ್ಕಾಗಿ ಲಾಭ ಗಳಿಸುತ್ತಿದೆ. ಇಂತಹ ಉತ್ತಮ ಸತ್ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.
ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ…
ಚೆನ್ನೈ : ತಮಿಳುನಾಡಿನ ದಶಕಗಳ ದ್ರಾವಿಡ ರಾಜಕಾರಣಕ್ಕೆ ಸವಾಲು ಹಾಕಿ ಅಖಾಡಕ್ಕಿಳಿದಿರುವ ದಳಪತಿ ವಿಜಯ್ ಅವರ ‘ತಮಿಳಗ ವೆಟ್ರಿ ಕಳಗಂ’…
ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ…
ವಾಷಿಂಗ್ಟನ್ : ಮಧ್ಯಪ್ರಾಚ್ಯದಲ್ಲಿ ಅಮೆರಿಕಾ-ಇರಾನ್ ನಡುವಿನ ಸಂಘರ್ಷದಲ್ಲಿ ಹೊರ್ಮುಜ್ ಜಲಸಂಧಿ ಕೇಂದ್ರಬಿಂದುವಾಗಿ ಹೊರಹೊಮ್ಮಿದೆ. ಈಗಾಗಲೇ ಅಮೆರಿಕ ನೌಕಾಪಡೆ ಈ ಜಲಸಂಧಿಯಲ್ಲಿ…
ರಾಜ್ಯಕ್ಕೆ 10ನೇ ಸ್ಥಾನ ಪಡೆದ ಮಹಾರಾಣಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಮೈಸೂರು : ಬಡತನದ ಬೇಗೆಯ ನಡುವೆಯೂ ಸಾಧನೆಯ ಛಲ…
ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ,…