ಬೆಂಗಳೂರು: ಸಹಕಾರಿ ವಲಯದ ಪ್ರಮುಖ ಬ್ಯಾಂಕ್ ಆಗಿರುವ ಬೆಂಗಳೂರಿನ ಬಸವನಗುಡಿಯ ಶ್ರೀ ಚರಣ್ ಸೌಹಾರ್ಧ ಕೋ ಆಪರೇಟೆವ್ ಬ್ಯಾಂಕ್ ಲಿಮಿಟೆಡ್ ಈ ಬಾರಿಯೂ ಲಾಭದತ್ತ ಸಾಗಿದ್ದು, ಒಟ್ಟಾರೆ 2.89 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ.
ಬ್ಯಾಂಕ್ನ 28 ನೇ ಸರ್ವ ಸದಸ್ಯರ ಸಭೆಯಲ್ಲಿ ಸಂಸ್ಥಾಪಕ ಅಧ್ಯಕ್ಷ ಬಿ.ವಿ.ಧ್ವಾರಕನಾಥ್ ವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು. ಕಳೆದ ವರ್ಷ ಬ್ಯಾಂಕ್ 2.85 ಕೋಟಿ ರೂಪಾಯಿ ಲಾಭಗಳಿಸಿತ್ತು.
ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ಬ್ಯಾಂಕಿನ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಿ ಮಾತನಾಡಿದ ಬಿ.ವಿ.ಧ್ವಾರಕನಾಥ್, ಸಹಕಾರಿ ವಲಯದಲ್ಲಿ ಅತ್ಯಂತ ವಿಶ್ವಾಸಾರ್ಹ ಮತ್ತು ಗ್ರಾಹಕರ ಹಿತರಕ್ಷಣೆಗೆ ಒತ್ತು ನೀಡಿರುವ ಬ್ಯಾಂಕ್ ವರ್ಷದಿಂದ ವರ್ಷಕ್ಕೆ ಪ್ರಗತಿ ಸಾಧಿಸುತ್ತಿದೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಗ್ರಾಹಕ ಸ್ನೇಹಿ ಜೊತೆಗೆ ಆರ್ಥಿಕ ಶಿಸ್ತಿಗೆ ಒತ್ತು ನೀಡಲಾಗುವುದು. ಆರ್ಬಿಐ ನಿಂದ ಬ್ಯಾಂಕಿಗೆ ಸೂಕ್ತ ರೀತಿಯಲ್ಲಿ ಮನ್ನಣೆ ದೊರೆತಿದ್ದು, ಇದನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರು.
ಬ್ಯಾಂಕಿನ ಗ್ರಾಹಕ ಹಾಗೂ ಚಲನಚಿತ್ರ ನಿರ್ಮಾಪಕ ಬಿ.ಕೆ ಶ್ರೀನಿವಾಸ್ (ನಿರ್ಮಾಪಕ ಬೆಂಕೋಶ್ರಿ) ಮಾತನಾಡಿ, ಬ್ಯಾಂಕ್ ನಲ್ಲಿ ಗ್ರಾಹಕರ ರಕ್ಷಣೆ ಜೊತೆಗೆ ಉತ್ತಮ ಆಡಳಿತದ ಕಾರಣಕ್ಕಾಗಿ ಲಾಭ ಗಳಿಸುತ್ತಿದೆ. ಇಂತಹ ಉತ್ತಮ ಸತ್ ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗಬೇಕು ಎಂದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…