ಮೈಸೂರು

‘ಶ್ರೀರಾಮ ಭಾರತೀಯತೆಯ ಸಂಕೇತ’: ಯದುವೀರ್‌ ಒಡೆಯರ್‌

ಮೈಸೂರು: ಶ್ರೀ ರಾಮನವಮಿ ಸಮಾನತೆ, ವೈಚಾರಿಕತೆ, ಆದರ್ಶಗಳಿಂದ ಕೂಡಿದ ಸಮ ಸಮಾಜದ ಪರಿಕಲ್ಪನೆಯಾಗಿದ್ದು, ನಮಗೆ ಸದಾ ಪ್ರೇರಣೆಯಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.

ಚಾಮರಾಜ ಕ್ಷೇತ್ರದ ಶಿವರಾಂಪೇಟೆಯಲ್ಲಿನ ಶ್ರೀರಾಮಮಂದಿರದಲ್ಲಿ ರಾಮ ನವಮಿ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿಯ ಶ್ರೀರಾಮ ನವಮಿಯು ಭಾರತೀಯರಿಗೆ ಅತೀ ವಿಶೇಷವಾಗಿದ್ದು, 5 ಶತಮಾನಗಳ ಭಾರತೀಯರ ಕನಸು ನನಸಾಗಿದೆ. ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿಂದ ಭಾರತೀಯರ ಅಸ್ಮಿತೆಯಾಗಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲಾಗುವುದು ಎಂದರು.

ಶ್ರೀರಾಮನ ಆದರ್ಶ, ಪ್ರಜಾಸೇವೆಯ ಪರಂಪರೆಯನ್ನು ಮೈಸೂರಿನ ಯದುವಂಶದ ಅರಸರು ಮುಂದುವರಿಸಿಕೊಂಡು ಬಂದಿದ್ದು, ‘ಸರ್ವರಿಗೂ ಸಮಬಾಳು-ಸರ್ವರಿಗೂ ಸಮ ಪಾಲು’ ಧೈಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪ್ರಜಾಸೇವೆಗೆ ಅವಕಾಶ ಬಯಸಿದ್ದು, ತಮ್ಮನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರತಕ್ಕೆ ಬಂದು ನೇರವಾಗಿ ವಿಚಾರಣೆ ಎದುರಿಸಬೇಕು : ವಿಜಯ್‌ ಮಲ್ಯೆಗೆ ಕೋರ್ಟ್‌ ಚಾಟಿ

ಮುಂಬೈ : ಲಂಡನ್ನಿನಲ್ಲಿ ಇದ್ದುಕೊಂಡು ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ (ಎಫ್‌ಇಒ) ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸುವ ಬದಲು, ಭಾರತಕ್ಕೆ…

20 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ವಾಣಿಜ್ಯ ಮಂಡಳಿ: ಹೊಸ ಬಿರುಸು, ಗರಿಗೆದರಿದ ಕಲಾವಿದರ ಸಂಘ

ಚುನಾವಣೆ ಕಳೆದು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೊಸ ಭಾರವಾಹಿಗಳ ಆಯ್ಕೆ ಆಗಿದೆ. ನಟ, ನಿರ್ಮಾಪಕಿ ಜಯಮಾಲ ನೇತೃತ್ವದ ಆಡಳಿತ ಮಂಡಳಿ…

2 hours ago

ಹೀಲಿಯಂ ಗ್ಯಾಸ್ ಬಲೂನ್ ಮಾರಾಟಕ್ಕಿಲ್ಲ ಕಡಿವಾಣ

ಹಳ್ಳಿಗಳ ಹಬ್ಬ, ಜಾತ್ರೆಗಳಲ್ಲಿ ಬಲೂನ್‌ಗಳ ಮಾರಾಟ ಅವಘಡ ಸಂಭವಿಸಿದರೆ ಯಾರು ಹೊಣೆ? 2025ರ ವರ್ಷಾಂತ್ಯದಲ್ಲಿ ಮೈಸೂರಿನಲ್ಲಿ ನಡೆದಿದ್ದ ಸ್ಫೋಟ ಬಲೂನ್‌ಗಳಿಗೆ…

3 hours ago

ನಗರೀಕರಣದಿಂದ ಮಾದಗಳ್ಳಿ ಕೆರೆಗೆ ಕಂಟಕ

ಕುಕ್ಕರಹಳ್ಳಿ ಕೆರೆಯ ಜಲಮೂಲ ಉಳಿವಿಕೆ ಅಭಿಯಾನ ಅಭಿಯಾನಕ್ಕೆ ಹೆಚ್ಚುತ್ತಿರುವ ಜನಬೆಂಬಲ ನಾಲಾ ನಡಿಗೆ, ನಾಲಾ ಹಬ್ಬ ಆಚರಿಸಲು ನಿರ್ಧಾರ ಗಿರೀಶ್‌…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಫೆಬ್ರವರಿ 13 ಶುಕ್ರವಾರ  

5 hours ago

T 20 World Cup : ನಮೀಬಿಯ ವಿರುದ್ಧ ಭಾರತಕ್ಕೆ 93 ರನ್‌ಗಳ ಭರ್ಜರಿ ಜಯ

ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…

14 hours ago