ಮೈಸೂರು: ಶ್ರೀ ರಾಮನವಮಿ ಸಮಾನತೆ, ವೈಚಾರಿಕತೆ, ಆದರ್ಶಗಳಿಂದ ಕೂಡಿದ ಸಮ ಸಮಾಜದ ಪರಿಕಲ್ಪನೆಯಾಗಿದ್ದು, ನಮಗೆ ಸದಾ ಪ್ರೇರಣೆಯಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಚಾಮರಾಜ ಕ್ಷೇತ್ರದ ಶಿವರಾಂಪೇಟೆಯಲ್ಲಿನ ಶ್ರೀರಾಮಮಂದಿರದಲ್ಲಿ ರಾಮ ನವಮಿ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿಯ ಶ್ರೀರಾಮ ನವಮಿಯು ಭಾರತೀಯರಿಗೆ ಅತೀ ವಿಶೇಷವಾಗಿದ್ದು, 5 ಶತಮಾನಗಳ ಭಾರತೀಯರ ಕನಸು ನನಸಾಗಿದೆ. ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿಂದ ಭಾರತೀಯರ ಅಸ್ಮಿತೆಯಾಗಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲಾಗುವುದು ಎಂದರು.
ಶ್ರೀರಾಮನ ಆದರ್ಶ, ಪ್ರಜಾಸೇವೆಯ ಪರಂಪರೆಯನ್ನು ಮೈಸೂರಿನ ಯದುವಂಶದ ಅರಸರು ಮುಂದುವರಿಸಿಕೊಂಡು ಬಂದಿದ್ದು, ‘ಸರ್ವರಿಗೂ ಸಮಬಾಳು-ಸರ್ವರಿಗೂ ಸಮ ಪಾಲು’ ಧೈಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪ್ರಜಾಸೇವೆಗೆ ಅವಕಾಶ ಬಯಸಿದ್ದು, ತಮ್ಮನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ…
ಸೋಮವಾರಪೇಟೆ: ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲ್ಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ. ಹಿರಿಕರ ಗ್ರಾಮದ ಕೃಷಿಕರು, ಗ್ರಾಮದ…
ಕಲಬುರ್ಗಿ: ಇಂದು(ಏಪ್ರಿಲ್.15, 2026) ರಾಜ್ಯದಲ್ಲಿಯೇ ಅತೀ ಹೆಚ್ಚು ಉಷ್ಣಾಂಶ ಕಲಬುರ್ಗಿ ಜಿಲ್ಲೆಯಲ್ಲಿ ದಾಖಲಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕಲಬುರ್ಗಿ ಜಿಲ್ಲೆಯ ನಾಲ್ಕು…
ಲಕ್ನೋ: ಕರ್ನಾಟಕ ಕಾಂಗ್ರೆಸ್ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು. 12 ಮಂದಿ ಶಾಸಕರು ಇಂದು…
ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ…
ಬೆಂಗಳೂರು: ಮಂಡ್ಯಕ್ಕೆ ಆಗಮಿಸಲು ಬೆಂಗಳೂರಿಗೆ ಬಂದಿಳಿದಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಮನವಿ ಪತ್ರ ಸಲ್ಲಿಸಿದ್ದಾರೆ. ಇಂದು…