ಮೈಸೂರು: ಶ್ರೀ ರಾಮನವಮಿ ಸಮಾನತೆ, ವೈಚಾರಿಕತೆ, ಆದರ್ಶಗಳಿಂದ ಕೂಡಿದ ಸಮ ಸಮಾಜದ ಪರಿಕಲ್ಪನೆಯಾಗಿದ್ದು, ನಮಗೆ ಸದಾ ಪ್ರೇರಣೆಯಾಗಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಚಾಮರಾಜ ಕ್ಷೇತ್ರದ ಶಿವರಾಂಪೇಟೆಯಲ್ಲಿನ ಶ್ರೀರಾಮಮಂದಿರದಲ್ಲಿ ರಾಮ ನವಮಿ ಪೂಜೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ಬಾರಿಯ ಶ್ರೀರಾಮ ನವಮಿಯು ಭಾರತೀಯರಿಗೆ ಅತೀ ವಿಶೇಷವಾಗಿದ್ದು, 5 ಶತಮಾನಗಳ ಭಾರತೀಯರ ಕನಸು ನನಸಾಗಿದೆ. ಲಕ್ಷಾಂತರ ಜನರ ತ್ಯಾಗ ಬಲಿದಾನಗಳಿಂದ ಭಾರತೀಯರ ಅಸ್ಮಿತೆಯಾಗಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದು, ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಲಾಗುವುದು ಎಂದರು.
ಶ್ರೀರಾಮನ ಆದರ್ಶ, ಪ್ರಜಾಸೇವೆಯ ಪರಂಪರೆಯನ್ನು ಮೈಸೂರಿನ ಯದುವಂಶದ ಅರಸರು ಮುಂದುವರಿಸಿಕೊಂಡು ಬಂದಿದ್ದು, ‘ಸರ್ವರಿಗೂ ಸಮಬಾಳು-ಸರ್ವರಿಗೂ ಸಮ ಪಾಲು’ ಧೈಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪ್ರಜಾಸೇವೆಗೆ ಅವಕಾಶ ಬಯಸಿದ್ದು, ತಮ್ಮನ್ನು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…