ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ಲಾಘಿಸಿದರು.
ನಗರದ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ರಾಜಕೀಯ ಸುವರ್ಣ ಮಹೋತ್ಸವ ಅಭಿನಂದನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1974ರಲ್ಲಿ ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನಾನು ಮತ್ತು ಅರಸು ಅವರು ಯುವ ನಾಯಕರಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿದ್ದ ಪ್ರಸಾದ್ ಅವರನ್ನು ಸೋಲಿಸಲು ಸ್ವಲ್ಪ ದಿನಗಳ ಕಾಲ ಮೈಸೂರಿನಲ್ಲಿಯೇ ಉಳಿದಿದ್ದೆವು. ಆ ಸಮಯದಲ್ಲಿ ನಮಗೆ ಪ್ರಸಾದ್ ಅವರ ಪ್ರಬುದ್ಧತೆ ಹಾಗೂ ವರ್ಚಸ್ಸು ಪರಿಚಯವಾಯಿತು ಎಂದು ಹೇಳಿದರು.
ಆಗಿನ ಕಾಲದಲ್ಲಿ ಚುನಾವಣೆ ನಡೆದರೆ ಸಾರ್ವಜನಿಕರೇ ಹಣ ನೀಡುತ್ತಿದ್ದರು. ಆ ಕಾಲದ ಸಮಯದಲ್ಲಿ ಚುನಾವಣಾ ಆಯೋಗವು ಶಿಸ್ತಿಗೆ ಬದ್ದವಾಗಿದ್ದು, ಆಯೋಗವೆಂದರೆ ಅಭ್ಯರ್ಥಿಗಳೇ ಭಯ ಪಡುತ್ತಿದ್ದರು ಎಂದರು.
ನಗರದ ಅಶೋಕಪುರಂಗೆ ಉಪ ಚುನಾವಣೆಯ ಸಂದರ್ಭದಲ್ಲಿ ಮತ ಕೇಳಲು ಹೋಗಿದ್ದಾಗ ಎಲ್ಲ ಮನೆಗಳಲ್ಲೂ ಅವರ ಬೆಂಬಲಿಗರೇ ಇರುತ್ತಿದ್ದರು. ಆ ಚುನಾವಣೆಯಲ್ಲಿ ಸೋಲು ಕಂಡರೂ ಕೂಡ ಅತಿ ಹೆಚ್ಚು ಮತಗಳನ್ನು ಪಡೆದು ರಾಜಕೀಯ ಪ್ರಜ್ಞಾವಂತರಾಗಿ ಚುನಾವಣೆಯ ನಾಯಕತ್ವಕ್ಕೆ ಭದ್ರ ಹಾಕಿಕೊಟ್ಟರು. ಹಾಗೆಯೇ 50ವರ್ಷದ ರಾಜಕೀಯ ಜೀವನದಲ್ಲಿ ತೆರೆದ ಪುಸ್ತಕವಿದ್ದಂತೆ ಜೀವಿಸಿದರು ಎಂದು ಹೇಳಿದರು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…