ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ಲಾಘಿಸಿದರು.
ನಗರದ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ರಾಜಕೀಯ ಸುವರ್ಣ ಮಹೋತ್ಸವ ಅಭಿನಂದನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1974ರಲ್ಲಿ ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನಾನು ಮತ್ತು ಅರಸು ಅವರು ಯುವ ನಾಯಕರಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿದ್ದ ಪ್ರಸಾದ್ ಅವರನ್ನು ಸೋಲಿಸಲು ಸ್ವಲ್ಪ ದಿನಗಳ ಕಾಲ ಮೈಸೂರಿನಲ್ಲಿಯೇ ಉಳಿದಿದ್ದೆವು. ಆ ಸಮಯದಲ್ಲಿ ನಮಗೆ ಪ್ರಸಾದ್ ಅವರ ಪ್ರಬುದ್ಧತೆ ಹಾಗೂ ವರ್ಚಸ್ಸು ಪರಿಚಯವಾಯಿತು ಎಂದು ಹೇಳಿದರು.
ಆಗಿನ ಕಾಲದಲ್ಲಿ ಚುನಾವಣೆ ನಡೆದರೆ ಸಾರ್ವಜನಿಕರೇ ಹಣ ನೀಡುತ್ತಿದ್ದರು. ಆ ಕಾಲದ ಸಮಯದಲ್ಲಿ ಚುನಾವಣಾ ಆಯೋಗವು ಶಿಸ್ತಿಗೆ ಬದ್ದವಾಗಿದ್ದು, ಆಯೋಗವೆಂದರೆ ಅಭ್ಯರ್ಥಿಗಳೇ ಭಯ ಪಡುತ್ತಿದ್ದರು ಎಂದರು.
ನಗರದ ಅಶೋಕಪುರಂಗೆ ಉಪ ಚುನಾವಣೆಯ ಸಂದರ್ಭದಲ್ಲಿ ಮತ ಕೇಳಲು ಹೋಗಿದ್ದಾಗ ಎಲ್ಲ ಮನೆಗಳಲ್ಲೂ ಅವರ ಬೆಂಬಲಿಗರೇ ಇರುತ್ತಿದ್ದರು. ಆ ಚುನಾವಣೆಯಲ್ಲಿ ಸೋಲು ಕಂಡರೂ ಕೂಡ ಅತಿ ಹೆಚ್ಚು ಮತಗಳನ್ನು ಪಡೆದು ರಾಜಕೀಯ ಪ್ರಜ್ಞಾವಂತರಾಗಿ ಚುನಾವಣೆಯ ನಾಯಕತ್ವಕ್ಕೆ ಭದ್ರ ಹಾಕಿಕೊಟ್ಟರು. ಹಾಗೆಯೇ 50ವರ್ಷದ ರಾಜಕೀಯ ಜೀವನದಲ್ಲಿ ತೆರೆದ ಪುಸ್ತಕವಿದ್ದಂತೆ ಜೀವಿಸಿದರು ಎಂದು ಹೇಳಿದರು.
ಮೈಸೂರು : ಮೈಸೂರು ಮಹಾನಗರಪಾಲಿಕೆ 2026-27ನೇ ಹಣಕಾಸು ವರ್ಷಕ್ಕೆ ಜಾರಿಗೊಳಿಸಲು ಘೋಷಿಸಿದ್ದ ಮೋಟಾರ್ ವಾಹನ ಸೆಸ್ ಅನ್ನು ರದ್ದುಗೊಳಿಸಿದೆ. ಇತ್ತೀಚಿಗೆ…
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…