ಮೈಸೂರು

ಸಾರ್ವಜನಿಕರನ್ನು ಆಯಸ್ಕಾದಂತೆ ಸೆಳೆದಿದ್ದ ಪ್ರಸಾದ್‌: ಎಸ್‌.ಎಂ ಕೃಷ್ಣ ಶ್ಲಾಘನೆ

ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್‌ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಅವರು ಶ್ಲಾಘಿಸಿದರು.

ನಗರದ ಕೆಎಸ್‌ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್‌ ಅವರ ರಾಜಕೀಯ ಸುವರ್ಣ ಮಹೋತ್ಸವ ಅಭಿನಂದನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

1974ರಲ್ಲಿ ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನಾನು ಮತ್ತು ಅರಸು ಅವರು ಯುವ ನಾಯಕರಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿದ್ದ ಪ್ರಸಾದ್‌ ಅವರನ್ನು ಸೋಲಿಸಲು ಸ್ವಲ್ಪ ದಿನಗಳ ಕಾಲ ಮೈಸೂರಿನಲ್ಲಿಯೇ ಉಳಿದಿದ್ದೆವು. ಆ ಸಮಯದಲ್ಲಿ ನಮಗೆ ಪ್ರಸಾದ್‌ ಅವರ ಪ್ರಬುದ್ಧತೆ ಹಾಗೂ ವರ್ಚಸ್ಸು ಪರಿಚಯವಾಯಿತು ಎಂದು ಹೇಳಿದರು.

ಆಗಿನ ಕಾಲದಲ್ಲಿ ಚುನಾವಣೆ ನಡೆದರೆ ಸಾರ್ವಜನಿಕರೇ ಹಣ ನೀಡುತ್ತಿದ್ದರು. ಆ ಕಾಲದ ಸಮಯದಲ್ಲಿ ಚುನಾವಣಾ ಆಯೋಗವು ಶಿಸ್ತಿಗೆ ಬದ್ದವಾಗಿದ್ದು, ಆಯೋಗವೆಂದರೆ ಅಭ್ಯರ್ಥಿಗಳೇ ಭಯ ಪಡುತ್ತಿದ್ದರು ಎಂದರು.

ನಗರದ ಅಶೋಕಪುರಂಗೆ ಉಪ ಚುನಾವಣೆಯ ಸಂದರ್ಭದಲ್ಲಿ ಮತ ಕೇಳಲು ಹೋಗಿದ್ದಾಗ ಎಲ್ಲ ಮನೆಗಳಲ್ಲೂ ಅವರ ಬೆಂಬಲಿಗರೇ ಇರುತ್ತಿದ್ದರು. ಆ ಚುನಾವಣೆಯಲ್ಲಿ ಸೋಲು ಕಂಡರೂ ಕೂಡ ಅತಿ ಹೆಚ್ಚು ಮತಗಳನ್ನು ಪಡೆದು ರಾಜಕೀಯ ಪ್ರಜ್ಞಾವಂತರಾಗಿ ಚುನಾವಣೆಯ ನಾಯಕತ್ವಕ್ಕೆ ಭದ್ರ ಹಾಕಿಕೊಟ್ಟರು. ಹಾಗೆಯೇ 50ವರ್ಷದ ರಾಜಕೀಯ ಜೀವನದಲ್ಲಿ ತೆರೆದ ಪುಸ್ತಕವಿದ್ದಂತೆ ಜೀವಿಸಿದರು ಎಂದು ಹೇಳಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರು| ಕುಡಿಯುವ ನೀರಿಗಾಗಿ ಪರದಾಟ: ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…

24 mins ago

ಕೆನಡಾದಲ್ಲಿ ಕನ್ನಡಿಗನ ಬರ್ಬರ ಹತ್ಯೆ

ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…

1 hour ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್‌ಗೆ ಸಿಗುತ್ತಾ ಅನುಮತಿ?: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು…

1 hour ago

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿ

ಬೆಂಗಳೂರು: ಪ್ರಧಾನಿ ಮೋದಿ ಮುಂದೆ ಸಂಸದ ತೇಜಸ್ವಿ ಸೂರ್ಯ ತಮ್ಮ ಎದೆಗಾರಿಕೆ ತೋರಿಸಲಿ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಕಿಡಿಕಾರಿದ್ದಾರೆ.…

3 hours ago

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

3 hours ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

4 hours ago