ಮೈಸೂರು: 50 ವರ್ಷಗಳ ಹಿಂದೆ ಚುನಾವಣಾ ರಾಜಕೀಯ ಪ್ರವೇಶಿಸಿದ ಪ್ರಸಾದ್ ಅವರು ಪ್ರಬುದ್ದ ರಾಜಕಾರಿಣಿಯಾಗಿ ಸಾರ್ವಜನಿಕರನ್ನು ಆಯಸ್ಕಾಂತದಂತೆ ಸೆಳೆದಿದ್ದರು ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಶ್ಲಾಘಿಸಿದರು.
ನಗರದ ಕೆಎಸ್ಓಯು ಘಟಿಕೋತ್ಸವ ಭವನದಲ್ಲಿ ಇತ್ತೀಚೆಗೆ ನಡೆದ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರ ರಾಜಕೀಯ ಸುವರ್ಣ ಮಹೋತ್ಸವ ಅಭಿನಂದನಾ ಸಮಾರಂಭ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
1974ರಲ್ಲಿ ಡಿ.ದೇವರಾಜು ಅರಸು ಅವರು ಮುಖ್ಯಮಂತ್ರಿ ಆಗಿದ್ದ ಕಾಲದಲ್ಲಿ ನಾನು ಮತ್ತು ಅರಸು ಅವರು ಯುವ ನಾಯಕರಾಗಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷೇತರಾಗಿ ಸ್ಪರ್ಧಿಸಿದ್ದ ಪ್ರಸಾದ್ ಅವರನ್ನು ಸೋಲಿಸಲು ಸ್ವಲ್ಪ ದಿನಗಳ ಕಾಲ ಮೈಸೂರಿನಲ್ಲಿಯೇ ಉಳಿದಿದ್ದೆವು. ಆ ಸಮಯದಲ್ಲಿ ನಮಗೆ ಪ್ರಸಾದ್ ಅವರ ಪ್ರಬುದ್ಧತೆ ಹಾಗೂ ವರ್ಚಸ್ಸು ಪರಿಚಯವಾಯಿತು ಎಂದು ಹೇಳಿದರು.
ಆಗಿನ ಕಾಲದಲ್ಲಿ ಚುನಾವಣೆ ನಡೆದರೆ ಸಾರ್ವಜನಿಕರೇ ಹಣ ನೀಡುತ್ತಿದ್ದರು. ಆ ಕಾಲದ ಸಮಯದಲ್ಲಿ ಚುನಾವಣಾ ಆಯೋಗವು ಶಿಸ್ತಿಗೆ ಬದ್ದವಾಗಿದ್ದು, ಆಯೋಗವೆಂದರೆ ಅಭ್ಯರ್ಥಿಗಳೇ ಭಯ ಪಡುತ್ತಿದ್ದರು ಎಂದರು.
ನಗರದ ಅಶೋಕಪುರಂಗೆ ಉಪ ಚುನಾವಣೆಯ ಸಂದರ್ಭದಲ್ಲಿ ಮತ ಕೇಳಲು ಹೋಗಿದ್ದಾಗ ಎಲ್ಲ ಮನೆಗಳಲ್ಲೂ ಅವರ ಬೆಂಬಲಿಗರೇ ಇರುತ್ತಿದ್ದರು. ಆ ಚುನಾವಣೆಯಲ್ಲಿ ಸೋಲು ಕಂಡರೂ ಕೂಡ ಅತಿ ಹೆಚ್ಚು ಮತಗಳನ್ನು ಪಡೆದು ರಾಜಕೀಯ ಪ್ರಜ್ಞಾವಂತರಾಗಿ ಚುನಾವಣೆಯ ನಾಯಕತ್ವಕ್ಕೆ ಭದ್ರ ಹಾಕಿಕೊಟ್ಟರು. ಹಾಗೆಯೇ 50ವರ್ಷದ ರಾಜಕೀಯ ಜೀವನದಲ್ಲಿ ತೆರೆದ ಪುಸ್ತಕವಿದ್ದಂತೆ ಜೀವಿಸಿದರು ಎಂದು ಹೇಳಿದರು.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…