ಮೈಸೂರು

ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ ಸಿದ್ದರಾಮಯ್ಯ : ಬಿಜೆಪಿ ವಕ್ತಾರ ಮಹೇಶ್‌ ಆರೋಪ

ಮೈಸೂರು : ಕಾಂಗ್ರೆಸ್‌ ಸರ್ಕಾರದಲ್ಲಿ ಎರಡು ಬಾರಿ ಸಿಎಂ ಆಗಿರುವ ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಬಿಜೆಪಿ ವಕ್ತಾರ ಎಂ.ಜಿ ಮಹೇಶ್‌ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಚಾಂಪಿಯನ್ ಎಂದು ಹೇಳಿಕೊಂಡು ಹಿಂದುಳಿದ ವರ್ಗಗಳಿಗೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ರಾಜಕೀಯ ಲಾಭಕ್ಕಾಗಿ ಹಿಂದುಳಿದ ವರ್ಗಗಳನ್ನು ಬಳಸಿಕೊಂಡಿರುವ ಸಿದ್ದರಾಮಯ್ಯ ಮಾತೆತ್ತಿದರೆ ಅಕ್ಕಿ ಕೊಟ್ಟೇ ಎಂದು ಹೇಳುತ್ತಾರೆ. ಆದರೆ ದೇವರಾಜ ಅರಸು ಅವರು ಉಳುವವರಿಗೆ ಭೂಮಿ ಕೊಟ್ಟರು. ಹಿಂದುಳಿದ ವರ್ಗಗಳ ನಾಯಕರನ್ನು ಬೆಳೆಸಿದರು‌. ದೇವರಾಜ ಅರಸು ಅವರೇ ನಿಜವಾದ ಹಿಂದುಳಿದ ವರ್ಗಗಳ ನಾಯಕರು. ಆದರೆ ಸಿದ್ದರಾಮಯ್ಯ ಅಧಿಕಾರ ಉಳಿಸಿಕೊಳ್ಳಲು ಹಿಂದುಳಿದ ವರ್ಗಗಳ ನಾಯಕ ಎಂದು ಹೇಳಿಕೊಳ್ಳುತ್ತಾರೆ ಎಂದು ಛೇಡಿಸಿದರು.

ಹಿಂದುಳಿದ ವರ್ಗಗಳ ಜನರಿಗೆ ದ್ರೋಹ ಮಾಡಿರುವ ಸಿದ್ದರಾಮಯ್ಯ ಅವರನ್ನು ಜನರು ಧಿಕ್ಕರಿಸಬೇಕು ಎಂದರು.

ಪ್ರಿಯಾಂಕ ಖರ್ಗೆ ವಿರುದ್ಧ ಕಿಡಿ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್‌ ಬ್ಯಾನ್ ಮಾಡುತ್ತೇವೆಂದು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಈಗಾಗಲೇ ಮೂರು ಮೂರು ಬಾರಿ ಆರ್‌ಎಸ್‌ಎಸ್‌ ಬ್ಯಾನ್ ಮಾಡಿತ್ತು.
ಇದೀಗ ಮತ್ತೆ ಆರ್‌ಎಸ್‌ಎಸ್‌ ನಿಷೇಧ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿರುವುದನ್ನು ಬಿಜೆಪಿ ಖಂಡಿಸುತ್ತದೆ ಎಂದು ಖಾರವಾಗಿ ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

ವಿಜೃಂಭಣೆಯಿಂದ ನಡೆದ ರಂಗನಾಥಸ್ವಾಮಿ ರಂಗಮುಡಿ ಉತ್ಸವ

ಶ್ರೀರಂಗಪಟ್ಟಣ: ಇಲ್ಲಿನ ಐತಿಹಾಸಿಕ ಶ್ರೀರಂಗನಾಥಸ್ವಾಮಿ ರಂಗಮುಡಿ ಉತ್ಸವ ಗುರುವಾರ(23-04-2026) ರಾತ್ರಿ ಸಂಭ್ರಮದಿಂದ ನೆರವೇರಿತು. ಮೇಷ ಮಾಸ, ಶುಕ್ಲಪಕ್ಷ, ಸಪ್ತಮಿ ದಿನದಂದು…

29 mins ago

ಕಾಡಾನೆ ದಾಳಿ: ರೈತನಿಗೆ ಗಂಭೀರ ಗಾಯ

ಎಚ್‌.ಡಿ.ಕೋಟೆ: ತಾಲ್ಲೂಕಿನ ಹಂಪಾಪುರ ಗ್ರಾಮದ ಸಮೀಪ ಇಂದು ಬೆಳಿಗ್ಗೆ ಕಾಡಾನೆಯೊಂದು ದಾಳಿ ನಡೆಸಿದ ಪರಿಣಾಮ ರೈತ ಸಿದ್ದೇಗೌಡ ಎಂಬುವವರಿಗೆ ಗಂಭೀರ…

1 hour ago

ಮಂತ್ರಾಲಯದಲ್ಲಿ 22 ದಿನದಲ್ಲಿ 3.25 ಕೋಟಿ ಕಾಣಿಕೆ ಸಂಗ್ರಹ

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25…

2 hours ago

ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ…

2 hours ago

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

5 hours ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

5 hours ago