ಮೈಸೂರು

ಸಿದ್ದರಾಮಯ್ಯ ಯಾವತ್ತೂ ಜಾತಿ ರಾಜಕೀಯ ಮಾಡಿಲ್ಲ: ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಕಷ್ಟವನ್ನುಅನುಭವಿಸುತ್ತಿದ್ದಾರೆ ಎಂಬ ಶಾಮನೂರು ಹೇಳಿಕೆಯನ್ನು ಅಲ್ಲಗೆಳೆದ ಅವರು, ಸರ್ಕಾರದಲ್ಲಿ 7 ಮಂದಿ ಲಿಂಗಾಯತ ಮಂತ್ರಿಗಳಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಶಾಮನೂರು ಶಿವಶಂಕರಪ್ಪನವರಿಗೆ ದಾಖಲೆಗಳನ್ನ ಕಳುಹಿಸಿಕೊಡುತ್ತೇನೆ. ಅವರನ್ನ ಭೇಟಿ ಮಾಡಿ ಮಾಹಿತಿ ಕೊಡುತ್ತೇನೆ. ಜಾತಿ ರಾಜಕಾರಣವನ್ನು ಸಿದ್ದರಾಮಯ್ಯ ಜೀವನದಲ್ಲಿ ಮಾಡಿಲ್ಲ. ಕುರುಬರೇ ಸರ್ಕಾರ ನಡೆಸುತ್ತಿದ್ದಾರೆ ಎನ್ನುವುದು ತಪ್ಪು. ಜಾತಿ ಜಾತಿಗಳ ನಡುವೆ ಜಗಳ ತರುವುದು ಬಿಜೆಪಿ ಕೆಲಸ.

ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯ ನಮ್ಮನ್ನು ಕೈಹಿಡಿದಿದೆ. ಒಕ್ಕಲಿಗರು ಸೇರಿದಂತೆ ಎಲ್ಲರೂ ಕೈ ಹಿಡಿದಿದ್ದಾರೆ ಎಂದು ಎಂ ಲಕ್ಷ್ಮಣ್ ಸ್ಪಷ್ಟನೆ ನೀಡಿದರು.

ಶ್ರಮ ಹಾಕಿದವರಿಗೆ ಅಧಿಕಾರ ಸಿಕ್ಕಿಲ್ಲ : ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಹಳಷ್ಟು ಸದ್ದು ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಗೆ ಆಹಾರ ಆಗಿದೆ. ಇದಕ್ಕೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ಪಕ್ಷ ಅಧಿಕಾರಕ್ಕೆ ಬರಲು ಲಕ್ಷಾಂತರ ಕಾರ್ಯಕರ್ತರ ಶ್ರಮ ಇದೆ. ಎಷ್ಟೊ ಜನರ ಮೇಲೆ ಕೇಸ್ ಗಳನ್ನು ಹಾಕಲಾಗಿದೆ. ಶ್ರಮ ಹಾಕಿದವರಿಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಅಧಿಕಾರದಲ್ಲಿರುವವರು ತಾಳ್ಮೆಯಿಂದ ಇರಬೇಕು. ಶಾಮನೂರು ಶಿವಶಂಕರಪ್ಪನವರ ಮೇಲೆ ಸಾಕಷ್ಟು ಗೌರವ ಇದೆ. ಯಾರೋ ಅವರನ್ನ ಮಿಸ್ ಲೀಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಾನು ಸಾಕಷ್ಟು ದಾಖಲೆಗಳನ್ನ ತೆಗೆದುಕೊಂಡಿದ್ದೇನೆ. 40 ಚೀಫ್ ಎಂಜಿನಿಯರ್ ಗಳಲ್ಲಿ 10 ಲಿಂಗಾಯತರು, 9 ವಕ್ಕಲಿಗರು, 4 ಕುರುಬರು ಇದ್ದಾರೆ. 41 ವಿಶ್ವವಿದ್ಯಾಲಯಗಳಲ್ಲಿ 14 ಜನ ಕುಲಪತಿಗಳು ಲಿಂಗಾಯತರು ಇದ್ದಾರೆ. ಬ್ರಾಹ್ಮಣರು 8 ಮಂದಿ ಇದ್ದಾರೆ. ರಾಜ್ಯದಲ್ಲಿ 272 ಐಎಎಸ್ ಅಧಿಕಾರಿಗಳಿದ್ದಾರೆ. 87 ಜನ ಕರ್ನಾಟಕದ ಕೇಡರ್ ಗಳಿದ್ದಾರೆ. ಉಳಿದವರು ಬೇರೆ ರಾಜ್ಯದವರು. 87 ಜನರ ಪೈಕಿ 22 ಮಂದಿ ಲಿಂಗಾಯತರು ಇದ್ದಾರೆ. 31 ಜಿಲ್ಲಾಧಿಕಾರಿಗಳ ಪೈಕಿ 4 ಲಿಂಗಾಯತರು, 5 ಮಂದಿ ಒಕ್ಕಲಿಗರಿದ್ದಾರೆ. ಸಿಇಒಗಳು ಪೈಕಿ 10 ಮಂದಿ ಲಿಂಗಾಯತರಿದ್ದಾರೆ, 9 ಒಕ್ಕಲಿಗರಿದ್ದಾರೆ. 409 ಕೆಎಸ್ ಅಧಿಕಾರಿಗಳಿದ್ದಾರೆ. ಇದರಲ್ಲಿ 102 ಮಂದಿ ಲಿಂಗಾಯರಿದ್ದಾರೆ. ಕುರುಬರು ಮೂವರಿದ್ದಾರೆ. ಜಾತಿ ಆಧಾರದ ಮೇಲೆ ಹುದ್ದೆ ಕೊಡುವುದಲ್ಲ. ಯಾವುದೇ ಜಾತಿಯನ್ನೂ ಕಡೆಗಣನೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.

ಸಿಪಿ ಯೋಗೇಶ್ವರ್ ಗೆ ಟಾಂಗ್ಸಂಕ್ರಾಂತಿ ಬಳಿಕ ಸರ್ಕಾರ ಬದಲಾಗುತ್ತದೆ ಎನ್ನುವ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ ಲಕ್ಷ್ಮಣ್, ಹೀಗೆ ಹೇಳುವವರಿಗೆ ತಲೆಕೆಟ್ಟಿದೆ. ಮೊದಲಿಂದಲೂ ಯತ್ನಾಳ್ ಹೀಗೆ ಹೇಳಿಕೊಂಡು ಓಡಾಡ್ತಿದ್ದಾರೆ. ಈಗಲೂ ಕಾಂಗ್ರೆಸ್ ಸೇರಲು 25 ರಿಂದ 30 ಎಂಎಲ್ ಎಗಳು ರೆಡಿ ಇದ್ದಾರೆ. ನಮ್ಮ ಪಕ್ಷದ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಅವರ ಪಕ್ಷದವರು ಹೋಗುವವರನ್ನು ತಡೆಯೋದಿಕ್ಕೆ ಹೀಗೆ ಸುಳ್ಳು ಹೇಳ್ಕೊಂಡು ತಿರುಗಾಡುತ್ತಿದ್ದಾರೆ ಎಂದು ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

andolanait

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

3 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

3 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

3 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

3 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

3 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

3 hours ago