ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಕಷ್ಟವನ್ನುಅನುಭವಿಸುತ್ತಿದ್ದಾರೆ ಎಂಬ ಶಾಮನೂರು ಹೇಳಿಕೆಯನ್ನು ಅಲ್ಲಗೆಳೆದ ಅವರು, ಸರ್ಕಾರದಲ್ಲಿ 7 ಮಂದಿ ಲಿಂಗಾಯತ ಮಂತ್ರಿಗಳಿದ್ದಾರೆ ಎಂದಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಶಾಮನೂರು ಶಿವಶಂಕರಪ್ಪನವರಿಗೆ ದಾಖಲೆಗಳನ್ನ ಕಳುಹಿಸಿಕೊಡುತ್ತೇನೆ. ಅವರನ್ನ ಭೇಟಿ ಮಾಡಿ ಮಾಹಿತಿ ಕೊಡುತ್ತೇನೆ. ಜಾತಿ ರಾಜಕಾರಣವನ್ನು ಸಿದ್ದರಾಮಯ್ಯ ಜೀವನದಲ್ಲಿ ಮಾಡಿಲ್ಲ. ಕುರುಬರೇ ಸರ್ಕಾರ ನಡೆಸುತ್ತಿದ್ದಾರೆ ಎನ್ನುವುದು ತಪ್ಪು. ಜಾತಿ ಜಾತಿಗಳ ನಡುವೆ ಜಗಳ ತರುವುದು ಬಿಜೆಪಿ ಕೆಲಸ.
ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯ ನಮ್ಮನ್ನು ಕೈಹಿಡಿದಿದೆ. ಒಕ್ಕಲಿಗರು ಸೇರಿದಂತೆ ಎಲ್ಲರೂ ಕೈ ಹಿಡಿದಿದ್ದಾರೆ ಎಂದು ಎಂ ಲಕ್ಷ್ಮಣ್ ಸ್ಪಷ್ಟನೆ ನೀಡಿದರು.
ಶ್ರಮ ಹಾಕಿದವರಿಗೆ ಅಧಿಕಾರ ಸಿಕ್ಕಿಲ್ಲ : ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಹಳಷ್ಟು ಸದ್ದು ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಗೆ ಆಹಾರ ಆಗಿದೆ. ಇದಕ್ಕೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ಪಕ್ಷ ಅಧಿಕಾರಕ್ಕೆ ಬರಲು ಲಕ್ಷಾಂತರ ಕಾರ್ಯಕರ್ತರ ಶ್ರಮ ಇದೆ. ಎಷ್ಟೊ ಜನರ ಮೇಲೆ ಕೇಸ್ ಗಳನ್ನು ಹಾಕಲಾಗಿದೆ. ಶ್ರಮ ಹಾಕಿದವರಿಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಅಧಿಕಾರದಲ್ಲಿರುವವರು ತಾಳ್ಮೆಯಿಂದ ಇರಬೇಕು. ಶಾಮನೂರು ಶಿವಶಂಕರಪ್ಪನವರ ಮೇಲೆ ಸಾಕಷ್ಟು ಗೌರವ ಇದೆ. ಯಾರೋ ಅವರನ್ನ ಮಿಸ್ ಲೀಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ನಾನು ಸಾಕಷ್ಟು ದಾಖಲೆಗಳನ್ನ ತೆಗೆದುಕೊಂಡಿದ್ದೇನೆ. 40 ಚೀಫ್ ಎಂಜಿನಿಯರ್ ಗಳಲ್ಲಿ 10 ಲಿಂಗಾಯತರು, 9 ವಕ್ಕಲಿಗರು, 4 ಕುರುಬರು ಇದ್ದಾರೆ. 41 ವಿಶ್ವವಿದ್ಯಾಲಯಗಳಲ್ಲಿ 14 ಜನ ಕುಲಪತಿಗಳು ಲಿಂಗಾಯತರು ಇದ್ದಾರೆ. ಬ್ರಾಹ್ಮಣರು 8 ಮಂದಿ ಇದ್ದಾರೆ. ರಾಜ್ಯದಲ್ಲಿ 272 ಐಎಎಸ್ ಅಧಿಕಾರಿಗಳಿದ್ದಾರೆ. 87 ಜನ ಕರ್ನಾಟಕದ ಕೇಡರ್ ಗಳಿದ್ದಾರೆ. ಉಳಿದವರು ಬೇರೆ ರಾಜ್ಯದವರು. 87 ಜನರ ಪೈಕಿ 22 ಮಂದಿ ಲಿಂಗಾಯತರು ಇದ್ದಾರೆ. 31 ಜಿಲ್ಲಾಧಿಕಾರಿಗಳ ಪೈಕಿ 4 ಲಿಂಗಾಯತರು, 5 ಮಂದಿ ಒಕ್ಕಲಿಗರಿದ್ದಾರೆ. ಸಿಇಒಗಳು ಪೈಕಿ 10 ಮಂದಿ ಲಿಂಗಾಯತರಿದ್ದಾರೆ, 9 ಒಕ್ಕಲಿಗರಿದ್ದಾರೆ. 409 ಕೆಎಸ್ ಅಧಿಕಾರಿಗಳಿದ್ದಾರೆ. ಇದರಲ್ಲಿ 102 ಮಂದಿ ಲಿಂಗಾಯರಿದ್ದಾರೆ. ಕುರುಬರು ಮೂವರಿದ್ದಾರೆ. ಜಾತಿ ಆಧಾರದ ಮೇಲೆ ಹುದ್ದೆ ಕೊಡುವುದಲ್ಲ. ಯಾವುದೇ ಜಾತಿಯನ್ನೂ ಕಡೆಗಣನೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.
ಸಿಪಿ ಯೋಗೇಶ್ವರ್ ಗೆ ಟಾಂಗ್ಸಂಕ್ರಾಂತಿ ಬಳಿಕ ಸರ್ಕಾರ ಬದಲಾಗುತ್ತದೆ ಎನ್ನುವ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ ಲಕ್ಷ್ಮಣ್, ಹೀಗೆ ಹೇಳುವವರಿಗೆ ತಲೆಕೆಟ್ಟಿದೆ. ಮೊದಲಿಂದಲೂ ಯತ್ನಾಳ್ ಹೀಗೆ ಹೇಳಿಕೊಂಡು ಓಡಾಡ್ತಿದ್ದಾರೆ. ಈಗಲೂ ಕಾಂಗ್ರೆಸ್ ಸೇರಲು 25 ರಿಂದ 30 ಎಂಎಲ್ ಎಗಳು ರೆಡಿ ಇದ್ದಾರೆ. ನಮ್ಮ ಪಕ್ಷದ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಅವರ ಪಕ್ಷದವರು ಹೋಗುವವರನ್ನು ತಡೆಯೋದಿಕ್ಕೆ ಹೀಗೆ ಸುಳ್ಳು ಹೇಳ್ಕೊಂಡು ತಿರುಗಾಡುತ್ತಿದ್ದಾರೆ ಎಂದು ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…