ಮೈಸೂರು

ಸಿದ್ದರಾಮಯ್ಯ ಯಾವತ್ತೂ ಜಾತಿ ರಾಜಕೀಯ ಮಾಡಿಲ್ಲ: ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಕಷ್ಟವನ್ನುಅನುಭವಿಸುತ್ತಿದ್ದಾರೆ ಎಂಬ ಶಾಮನೂರು ಹೇಳಿಕೆಯನ್ನು ಅಲ್ಲಗೆಳೆದ ಅವರು, ಸರ್ಕಾರದಲ್ಲಿ 7 ಮಂದಿ ಲಿಂಗಾಯತ ಮಂತ್ರಿಗಳಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಶಾಮನೂರು ಶಿವಶಂಕರಪ್ಪನವರಿಗೆ ದಾಖಲೆಗಳನ್ನ ಕಳುಹಿಸಿಕೊಡುತ್ತೇನೆ. ಅವರನ್ನ ಭೇಟಿ ಮಾಡಿ ಮಾಹಿತಿ ಕೊಡುತ್ತೇನೆ. ಜಾತಿ ರಾಜಕಾರಣವನ್ನು ಸಿದ್ದರಾಮಯ್ಯ ಜೀವನದಲ್ಲಿ ಮಾಡಿಲ್ಲ. ಕುರುಬರೇ ಸರ್ಕಾರ ನಡೆಸುತ್ತಿದ್ದಾರೆ ಎನ್ನುವುದು ತಪ್ಪು. ಜಾತಿ ಜಾತಿಗಳ ನಡುವೆ ಜಗಳ ತರುವುದು ಬಿಜೆಪಿ ಕೆಲಸ.

ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯ ನಮ್ಮನ್ನು ಕೈಹಿಡಿದಿದೆ. ಒಕ್ಕಲಿಗರು ಸೇರಿದಂತೆ ಎಲ್ಲರೂ ಕೈ ಹಿಡಿದಿದ್ದಾರೆ ಎಂದು ಎಂ ಲಕ್ಷ್ಮಣ್ ಸ್ಪಷ್ಟನೆ ನೀಡಿದರು.

ಶ್ರಮ ಹಾಕಿದವರಿಗೆ ಅಧಿಕಾರ ಸಿಕ್ಕಿಲ್ಲ : ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಹಳಷ್ಟು ಸದ್ದು ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಗೆ ಆಹಾರ ಆಗಿದೆ. ಇದಕ್ಕೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ಪಕ್ಷ ಅಧಿಕಾರಕ್ಕೆ ಬರಲು ಲಕ್ಷಾಂತರ ಕಾರ್ಯಕರ್ತರ ಶ್ರಮ ಇದೆ. ಎಷ್ಟೊ ಜನರ ಮೇಲೆ ಕೇಸ್ ಗಳನ್ನು ಹಾಕಲಾಗಿದೆ. ಶ್ರಮ ಹಾಕಿದವರಿಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಅಧಿಕಾರದಲ್ಲಿರುವವರು ತಾಳ್ಮೆಯಿಂದ ಇರಬೇಕು. ಶಾಮನೂರು ಶಿವಶಂಕರಪ್ಪನವರ ಮೇಲೆ ಸಾಕಷ್ಟು ಗೌರವ ಇದೆ. ಯಾರೋ ಅವರನ್ನ ಮಿಸ್ ಲೀಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಾನು ಸಾಕಷ್ಟು ದಾಖಲೆಗಳನ್ನ ತೆಗೆದುಕೊಂಡಿದ್ದೇನೆ. 40 ಚೀಫ್ ಎಂಜಿನಿಯರ್ ಗಳಲ್ಲಿ 10 ಲಿಂಗಾಯತರು, 9 ವಕ್ಕಲಿಗರು, 4 ಕುರುಬರು ಇದ್ದಾರೆ. 41 ವಿಶ್ವವಿದ್ಯಾಲಯಗಳಲ್ಲಿ 14 ಜನ ಕುಲಪತಿಗಳು ಲಿಂಗಾಯತರು ಇದ್ದಾರೆ. ಬ್ರಾಹ್ಮಣರು 8 ಮಂದಿ ಇದ್ದಾರೆ. ರಾಜ್ಯದಲ್ಲಿ 272 ಐಎಎಸ್ ಅಧಿಕಾರಿಗಳಿದ್ದಾರೆ. 87 ಜನ ಕರ್ನಾಟಕದ ಕೇಡರ್ ಗಳಿದ್ದಾರೆ. ಉಳಿದವರು ಬೇರೆ ರಾಜ್ಯದವರು. 87 ಜನರ ಪೈಕಿ 22 ಮಂದಿ ಲಿಂಗಾಯತರು ಇದ್ದಾರೆ. 31 ಜಿಲ್ಲಾಧಿಕಾರಿಗಳ ಪೈಕಿ 4 ಲಿಂಗಾಯತರು, 5 ಮಂದಿ ಒಕ್ಕಲಿಗರಿದ್ದಾರೆ. ಸಿಇಒಗಳು ಪೈಕಿ 10 ಮಂದಿ ಲಿಂಗಾಯತರಿದ್ದಾರೆ, 9 ಒಕ್ಕಲಿಗರಿದ್ದಾರೆ. 409 ಕೆಎಸ್ ಅಧಿಕಾರಿಗಳಿದ್ದಾರೆ. ಇದರಲ್ಲಿ 102 ಮಂದಿ ಲಿಂಗಾಯರಿದ್ದಾರೆ. ಕುರುಬರು ಮೂವರಿದ್ದಾರೆ. ಜಾತಿ ಆಧಾರದ ಮೇಲೆ ಹುದ್ದೆ ಕೊಡುವುದಲ್ಲ. ಯಾವುದೇ ಜಾತಿಯನ್ನೂ ಕಡೆಗಣನೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.

ಸಿಪಿ ಯೋಗೇಶ್ವರ್ ಗೆ ಟಾಂಗ್ಸಂಕ್ರಾಂತಿ ಬಳಿಕ ಸರ್ಕಾರ ಬದಲಾಗುತ್ತದೆ ಎನ್ನುವ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ ಲಕ್ಷ್ಮಣ್, ಹೀಗೆ ಹೇಳುವವರಿಗೆ ತಲೆಕೆಟ್ಟಿದೆ. ಮೊದಲಿಂದಲೂ ಯತ್ನಾಳ್ ಹೀಗೆ ಹೇಳಿಕೊಂಡು ಓಡಾಡ್ತಿದ್ದಾರೆ. ಈಗಲೂ ಕಾಂಗ್ರೆಸ್ ಸೇರಲು 25 ರಿಂದ 30 ಎಂಎಲ್ ಎಗಳು ರೆಡಿ ಇದ್ದಾರೆ. ನಮ್ಮ ಪಕ್ಷದ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಅವರ ಪಕ್ಷದವರು ಹೋಗುವವರನ್ನು ತಡೆಯೋದಿಕ್ಕೆ ಹೀಗೆ ಸುಳ್ಳು ಹೇಳ್ಕೊಂಡು ತಿರುಗಾಡುತ್ತಿದ್ದಾರೆ ಎಂದು ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

andolanait

Recent Posts

ನೊಂದ ಪುರುಷರ ಹಕ್ಕುಗಳ ರಕ್ಷಣೆಗೆ ಆಯೋಗ ರಚಿಸಿ ; ಎ.ಎಚ್.ವಿಶ್ವನಾಥ್‌

ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…

6 hours ago

ಮೈಸೂರು | ಎನ್‌.ಆರ್‌.ಕ್ಷೇತ್ರದಲ್ಲಿ ನಿಯಮಬಾಹಿರ ಎಸ್‌ಐಆರ್‌ : ಸಂಸದ ಯದುವೀರ್ ಆರೋಪ

ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…

6 hours ago

‘ಕೊಲೆ ಬಗ್ಗೆ ನಮಗೆ ಗೊತ್ತೇ ಇರಲಿಲ್ಲ’

ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…

12 hours ago

ಕೊಡಗು ಜಿಲ್ಲೆಯಾದ್ಯಂತ ಚುರುಕುಗೊಂಡ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…

14 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…

15 hours ago

ಮನುಷ್ಯ ಕುಲದ ಪ್ರಜ್ಞಾವಂತಿಕೆ ವಿಕಾಸಕ್ಕೆ ಗಾಂಧೀಜಿ ಕೈಮರ

ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…

16 hours ago