ಮೈಸೂರು

ಸಿದ್ದರಾಮಯ್ಯ ಯಾವತ್ತೂ ಜಾತಿ ರಾಜಕೀಯ ಮಾಡಿಲ್ಲ: ಲಕ್ಷ್ಮಣ್‌

ಮೈಸೂರು: ಸಿಎಂ ಸಿದ್ದರಾಮಯ್ಯ ಇಡೀ ರಾಜಕೀಯ ಜೀವನದಲ್ಲಿ ಜಾತಿ ರಾಜಕಾರಣ ಮಾಡಿಲ್, ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ ಅಂತ ಕೆಪಿಸಿಸಿ ವಕ್ತಾರ ಲಕ್ಷ್ಮಣ್ ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳು ಕಷ್ಟವನ್ನುಅನುಭವಿಸುತ್ತಿದ್ದಾರೆ ಎಂಬ ಶಾಮನೂರು ಹೇಳಿಕೆಯನ್ನು ಅಲ್ಲಗೆಳೆದ ಅವರು, ಸರ್ಕಾರದಲ್ಲಿ 7 ಮಂದಿ ಲಿಂಗಾಯತ ಮಂತ್ರಿಗಳಿದ್ದಾರೆ ಎಂದಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಶಾಮನೂರು ಶಿವಶಂಕರಪ್ಪನವರಿಗೆ ದಾಖಲೆಗಳನ್ನ ಕಳುಹಿಸಿಕೊಡುತ್ತೇನೆ. ಅವರನ್ನ ಭೇಟಿ ಮಾಡಿ ಮಾಹಿತಿ ಕೊಡುತ್ತೇನೆ. ಜಾತಿ ರಾಜಕಾರಣವನ್ನು ಸಿದ್ದರಾಮಯ್ಯ ಜೀವನದಲ್ಲಿ ಮಾಡಿಲ್ಲ. ಕುರುಬರೇ ಸರ್ಕಾರ ನಡೆಸುತ್ತಿದ್ದಾರೆ ಎನ್ನುವುದು ತಪ್ಪು. ಜಾತಿ ಜಾತಿಗಳ ನಡುವೆ ಜಗಳ ತರುವುದು ಬಿಜೆಪಿ ಕೆಲಸ.

ಶಾಮನೂರು ಶಿವಶಂಕರಪ್ಪನವರಿಗೆ ಯಾರು ಸುಳ್ಳು ಮಾಹಿತಿ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯ ನಮ್ಮನ್ನು ಕೈಹಿಡಿದಿದೆ. ಒಕ್ಕಲಿಗರು ಸೇರಿದಂತೆ ಎಲ್ಲರೂ ಕೈ ಹಿಡಿದಿದ್ದಾರೆ ಎಂದು ಎಂ ಲಕ್ಷ್ಮಣ್ ಸ್ಪಷ್ಟನೆ ನೀಡಿದರು.

ಶ್ರಮ ಹಾಕಿದವರಿಗೆ ಅಧಿಕಾರ ಸಿಕ್ಕಿಲ್ಲ : ಶಾಮನೂರು ಶಿವಶಂಕರಪ್ಪನವರ ಹೇಳಿಕೆ ಬಹಳಷ್ಟು ಸದ್ದು ಮಾಡುತ್ತಿದೆ. ಬಿಜೆಪಿ ಜೆಡಿಎಸ್ ಗೆ ಆಹಾರ ಆಗಿದೆ. ಇದಕ್ಕೆ ಸ್ಪಷ್ಟೀಕರಣ ಕೊಡುತ್ತಿದ್ದೇನೆ. ಪಕ್ಷ ಅಧಿಕಾರಕ್ಕೆ ಬರಲು ಲಕ್ಷಾಂತರ ಕಾರ್ಯಕರ್ತರ ಶ್ರಮ ಇದೆ. ಎಷ್ಟೊ ಜನರ ಮೇಲೆ ಕೇಸ್ ಗಳನ್ನು ಹಾಕಲಾಗಿದೆ. ಶ್ರಮ ಹಾಕಿದವರಿಗೆ ಯಾವುದೇ ಅಧಿಕಾರ ಸಿಕ್ಕಿಲ್ಲ. ಅಧಿಕಾರದಲ್ಲಿರುವವರು ತಾಳ್ಮೆಯಿಂದ ಇರಬೇಕು. ಶಾಮನೂರು ಶಿವಶಂಕರಪ್ಪನವರ ಮೇಲೆ ಸಾಕಷ್ಟು ಗೌರವ ಇದೆ. ಯಾರೋ ಅವರನ್ನ ಮಿಸ್ ಲೀಡ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಾನು ಸಾಕಷ್ಟು ದಾಖಲೆಗಳನ್ನ ತೆಗೆದುಕೊಂಡಿದ್ದೇನೆ. 40 ಚೀಫ್ ಎಂಜಿನಿಯರ್ ಗಳಲ್ಲಿ 10 ಲಿಂಗಾಯತರು, 9 ವಕ್ಕಲಿಗರು, 4 ಕುರುಬರು ಇದ್ದಾರೆ. 41 ವಿಶ್ವವಿದ್ಯಾಲಯಗಳಲ್ಲಿ 14 ಜನ ಕುಲಪತಿಗಳು ಲಿಂಗಾಯತರು ಇದ್ದಾರೆ. ಬ್ರಾಹ್ಮಣರು 8 ಮಂದಿ ಇದ್ದಾರೆ. ರಾಜ್ಯದಲ್ಲಿ 272 ಐಎಎಸ್ ಅಧಿಕಾರಿಗಳಿದ್ದಾರೆ. 87 ಜನ ಕರ್ನಾಟಕದ ಕೇಡರ್ ಗಳಿದ್ದಾರೆ. ಉಳಿದವರು ಬೇರೆ ರಾಜ್ಯದವರು. 87 ಜನರ ಪೈಕಿ 22 ಮಂದಿ ಲಿಂಗಾಯತರು ಇದ್ದಾರೆ. 31 ಜಿಲ್ಲಾಧಿಕಾರಿಗಳ ಪೈಕಿ 4 ಲಿಂಗಾಯತರು, 5 ಮಂದಿ ಒಕ್ಕಲಿಗರಿದ್ದಾರೆ. ಸಿಇಒಗಳು ಪೈಕಿ 10 ಮಂದಿ ಲಿಂಗಾಯತರಿದ್ದಾರೆ, 9 ಒಕ್ಕಲಿಗರಿದ್ದಾರೆ. 409 ಕೆಎಸ್ ಅಧಿಕಾರಿಗಳಿದ್ದಾರೆ. ಇದರಲ್ಲಿ 102 ಮಂದಿ ಲಿಂಗಾಯರಿದ್ದಾರೆ. ಕುರುಬರು ಮೂವರಿದ್ದಾರೆ. ಜಾತಿ ಆಧಾರದ ಮೇಲೆ ಹುದ್ದೆ ಕೊಡುವುದಲ್ಲ. ಯಾವುದೇ ಜಾತಿಯನ್ನೂ ಕಡೆಗಣನೆ ಮಾಡಿಲ್ಲ ಎಂದು ಮಾಹಿತಿ ನೀಡಿದರು.

ಸಿಪಿ ಯೋಗೇಶ್ವರ್ ಗೆ ಟಾಂಗ್ಸಂಕ್ರಾಂತಿ ಬಳಿಕ ಸರ್ಕಾರ ಬದಲಾಗುತ್ತದೆ ಎನ್ನುವ ಸಿಪಿ ಯೋಗೇಶ್ವರ್ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ ಲಕ್ಷ್ಮಣ್, ಹೀಗೆ ಹೇಳುವವರಿಗೆ ತಲೆಕೆಟ್ಟಿದೆ. ಮೊದಲಿಂದಲೂ ಯತ್ನಾಳ್ ಹೀಗೆ ಹೇಳಿಕೊಂಡು ಓಡಾಡ್ತಿದ್ದಾರೆ. ಈಗಲೂ ಕಾಂಗ್ರೆಸ್ ಸೇರಲು 25 ರಿಂದ 30 ಎಂಎಲ್ ಎಗಳು ರೆಡಿ ಇದ್ದಾರೆ. ನಮ್ಮ ಪಕ್ಷದ ಹೈಕಮಾಂಡ್ ಇನ್ನೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ. ಅವರ ಪಕ್ಷದವರು ಹೋಗುವವರನ್ನು ತಡೆಯೋದಿಕ್ಕೆ ಹೀಗೆ ಸುಳ್ಳು ಹೇಳ್ಕೊಂಡು ತಿರುಗಾಡುತ್ತಿದ್ದಾರೆ ಎಂದು ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು.

andolanait

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

2 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

3 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

3 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

8 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

9 hours ago