ಮೈಸೂರು

ಸಚಿವ ವೆಂಕಟೇಶ್ ಅವರದ್ದು ಮಾತು ಕಡಿಮೆ, ಕೆಲಸ ಜಾಸ್ತಿ: ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ‌ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.

ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.

ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಕಿಡಿಕಾರಿದರು.

ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು, ಜನರ ದಿಕ್ಕು ತಪ್ಪಿಸಿ ಕಾಲ‌ ಕಳೆದು ಮನೆಗೆ ಹೋದರು ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

10 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

10 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

11 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

11 hours ago