ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.
ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಕಿಡಿಕಾರಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು, ಜನರ ದಿಕ್ಕು ತಪ್ಪಿಸಿ ಕಾಲ ಕಳೆದು ಮನೆಗೆ ಹೋದರು ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…