ಪಿರಿಯಾಪಟ್ಟಣ: ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಗೂ ಅಪಾರ ಹಣ ಕೊಡುತ್ತಿದ್ದೇವೆ. ಬಿಜೆಪಿಯವರಿಗೆ ಇದೇ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಪಿರಿಯಾಪಟ್ಟಣದಲ್ಲಿಂದು ಜಿಲ್ಲಾಡಳಿತ ಮತ್ತು ನಾನಾ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ 439.88 ಕೋಟಿ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆಗಳನ್ನು ನೆರವೇರಿಸಿ ಬಳಿಕ ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ, ಅಂಬೇಡ್ಕರ್-ಬಾಬು ಜಗಜೀವನ್ ರಾಮ್ ಜನ್ಮ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪಿರಿಯಾಪಟ್ಟಣ ಕೃಷಿ ಪ್ರಧಾನ ಕ್ಷೇತ್ರ. ಹೀಗಾಗಿ 300ಕ್ಕೂ ಹೆಚ್ಚು ರೈತರಿಗೆ 100 ಕೋಟಿಗೂ ಅಧಿಕ ಮೊತ್ತದ ಕೃಷಿ ಯಂತ್ರೋಪಕರಣಗಳನ್ನು ಇಂದು ವಿತರಿಸಲಾಗಿದೆ. ಕೃಷಿ ಕಾರ್ಮಿಕರು ನಗರಗಳಿಗೆ ವಲಸೆ ಹೋಗಿದ್ದರಿಂದ ಗ್ರಾಮೀಣ ರೈತರು ಯಂತ್ರಗಳ ಮೇಲೆ ಅವಲಂಬಿತರಾಗಬೇಕಾಗಿದೆ ಎಂದು ವಿವರಿಸಿದರು.
ಹಿಂದಿನ ವರ್ಷ ಜಲಾಶಯಗಳೆಲ್ಲಾ ತುಂಬಿ ರಾಜ್ಯದಲ್ಲಿ ಮಳೆ ಬೆಳೆ ಚನ್ನಾಗಿ ಆಗಿದೆ. ಈ ವರ್ಷವೂ ಒಳ್ಳೆ ಮಳೆ ಆಗಿ ರೈತರ ಮುಖದಲ್ಲಿ ಮಂದಹಾಸ ಮೂಡುತ್ತದೆ ಎಂದರು.
ರಾಜ್ಯದ ಬಡವ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ತಿಂಗಳಿಗೆ 5 ರಿಂದ 6 ಸಾವಿರ ರೂಪಾಯಿ ಹಣ ಗ್ಯಾರಂಟಿಗಳ ಮೂಲಕ ತಲುಪುತ್ತಿದೆ. ಈ ಗ್ಯಾರಂಟಿಗಳಲ್ಲದೆ ಎಲ್ಲಾ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಫಲ ಕೂಡ ನಾಡಿನ ದೊರೆಗಳಾದ ಜನರ ಮನೆ ಬಾಗಿಲಿಗೆ ತಲುಪುತ್ತಿದೆ. ಜನರಿಗೆ ಪ್ರತೀ ದಿನ ಒಂದಲ್ಲಾ ಒಂದು ರೀತಿಯಲ್ಲಿ ಸರ್ಕಾರದ ಅಭಿವೃದ್ಧಿ ಕಾಣಿಸುತ್ತಿದೆ. ಆದರೆ, ಬಿಜೆಪಿ ಮಾತ್ರ ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಕಿಡಿಕಾರಿದರು.
ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಬರೀ ಸುಳ್ಳು ಹೇಳಿಕೊಂಡು, ದೇವರು ಧರ್ಮದ ಹೆಸರಲ್ಲಿ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಂಡು, ಜನರ ದಿಕ್ಕು ತಪ್ಪಿಸಿ ಕಾಲ ಕಳೆದು ಮನೆಗೆ ಹೋದರು ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮೈಸೂರು: ನಗರದ ಸಾಂಸ್ಕೃತಿಕ ಹಬ್ಬಗಳಲ್ಲಿ ಒಂದಾದ 102 ನೇ ವರ್ಷದ ಮೈಸೂರು ಕರಗ ಮಹೋತ್ಸವದ ಅದ್ಧೂರಿ ಮೆರವಣಿಗೆಗೆ ಚಾಲನೆ ನೀಡಲಾಗಿದೆ.…
ಬೆಂಗಳೂರು: ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ನೀಡುವ ರಾಜ್ಯ ಸರ್ಕಾರ ಇನ್ನೊಂದೆಡೆ ಬೆಲೆ ಏರಿಕೆಯನ್ನು ಮಾಡುತ್ತಲೇ ಬಂದಿದೆ ಎಂಬ ಸಾರ್ವಜನಿಕರ ಆರೋಪ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಏಪ್ರಿಲ್ 2026ರ ಅಂತ್ಯದ ವೇಳೆಗೆ ಬಿಸಿಲಿನ ತಾಪಮಾನ ತೀವ್ರವಾಗಿ ಹೆಚ್ಚಾಗಿದೆ. ಇದು ಜನಜೀವನದ ಮೇಲೆ…
ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ. ಡಾ.ರಾಜ್ಕುಮಾರ್…
ಬೆಳಗಾವಿ: ರಾಜ್ಯದಲ್ಲಿ ಸಿಎಂ ಕುರ್ಚಿ ಖಾಲಿ ಇಲಲ್. ಅಧಿಕಾರ ಹಂಚಿಕೆ ವಿಚಾರವಾಗಿ ಏನೆಲ್ಲಾ ಮಾತುಕತೆ ಆಗಿದೆ ಎಂಬುದೂ ಗೊತ್ತಿಲ್ಲ ಎಂದು…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದ್ದು, ಕೆಂಗೇರಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಭೀಕರ…