ಮೈಸೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಕಂಸಾಳೆ ರವಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಘಟನೆ ಇಂದು ಭಾನುವಾರ ನಡೆದಿದೆ.
ಮೋದಿ ರೋಡ್ ಶೋ ಮಾಡಿದ್ದ ಮೈಸೂರಿನ ಸಯ್ಯಾಜಿ ರಸ್ತೆಗೆ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಗೋ ಮೂತ್ರ, ನೀರು ಹಾಕಿ ಸ್ವಚ್ಛ ಮಾಡಿದ್ದಾರೆ. ಚುನಾವಣೆ ಮೊದಲು ಮೈಸೂರಿನ ರಾಜಮಾರ್ಗದಲ್ಲಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆಗೆ ಮೈಸೂರು ಕಾಂಗ್ರೆಸ್ ಮುಖಂಡರು ಸಗಣಿ ನೀರು ಹಾಕಿ ಸ್ವಚ್ಛಗೊಳಿಸುವ ಮೂಲಕ ಬಿಜೆಪಿಯನ್ನು ವ್ಯಂಗ್ಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ ಕಂಸಾಳೆ ರವಿ, ಚುನಾವಣೆಗೂ ಮುನ್ನ ಮೈಸೂರಿನ ರಾಜ ಮಾರ್ಗದಲ್ಲಿ ಭರ್ಜರಿ ರೋಡ್ ಶೋ ಮೋದಿ ನಡೆಸಿದ್ದರು. ಅಂಬಾರಿ ಹಾದು ಹೋಗುವ ರಾಜ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೆ ದೊಡ್ಡ ತಪ್ಪು. ಇದು ರಾಜ ಮನೆತನಕ್ಕೆ ಮಾಡಿದ ಅಪಮಾನ.ಅಂಬಾರಿ ಬಿಟ್ಟರೆ ಇನ್ಯಾವುದೇ ದೊಡ್ಡ ಮೆರವಣಿಗೆ ಇಲ್ಲಿ ಮಾಡಿರಲಿಲ್ಲ. ಆದರೆ ಹಿಂದುತ್ವದ ಹೆಸರೇಳುವ ಬಿಜೆಪಿಯವರು ನಾಡಹಬ್ಬಕ್ಕೆ ಅಪಮಾನ ಆಗುವ ಹಾಗೇ ರೋಡ್ ಶೋ ಮಾಡಿದ್ದಾರೆ. ಹಾಗಾಗಿ ಮೈಸೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಿದೆ. ಈ ರಸ್ತೆಗೆ ಆಗಿರುವ ಕೊಳೆಯನ್ನು ತೊಳೆಯಲು ಸಗಣಿ ನೀರು ಹಾಕಿ ಸ್ವಚ್ಛ ಮಾಡುತ್ತಿದ್ದೇವೆ ಎಂದು ಟೀಕಿಸಿದರು.
ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡು ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ಬೆಂಗಳೂರು: ದಿನದಿಂದ ದಿನಕ್ಕೆ ಸಾರಿಗೆ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಕಾರಣ ಶೀಘ್ರದಲ್ಲೇ ರಾಜ್ಯ ಸರ್ಕಾರ ಬಸ್ ಪ್ರಯಾಣ…
ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲೇಬರ್ ಪಕ್ಷದೊಳಗೆ…
ಟಿ.ನರಸೀಪುರ: ಡೆತ್ನೋಟ್ ಬರೆದಿಟ್ಟು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ…
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…