ಮೈಸೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ರೋಡ್ ಶೋ ನಡೆಸಿದ್ದರು. ಪ್ರಧಾನಿ ಮೋದಿ ರೋಡ್ ಶೋ ನಡೆಸಿದ ರಸ್ತೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯನವರ ಅಭಿಮಾನಿ ಕಂಸಾಳೆ ರವಿ ಗೋಮೂತ್ರದಿಂದ ಸ್ವಚ್ಛಗೊಳಿಸಿದ ಘಟನೆ ಇಂದು ಭಾನುವಾರ ನಡೆದಿದೆ.
ಮೋದಿ ರೋಡ್ ಶೋ ಮಾಡಿದ್ದ ಮೈಸೂರಿನ ಸಯ್ಯಾಜಿ ರಸ್ತೆಗೆ ಕಾಂಗ್ರೆಸ್ ಕಾರ್ಯಕರ್ತರು ಸಗಣಿ ಗೋ ಮೂತ್ರ, ನೀರು ಹಾಕಿ ಸ್ವಚ್ಛ ಮಾಡಿದ್ದಾರೆ. ಚುನಾವಣೆ ಮೊದಲು ಮೈಸೂರಿನ ರಾಜಮಾರ್ಗದಲ್ಲಿ ಮೋದಿ ಭರ್ಜರಿ ರೋಡ್ ಶೋ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ರಸ್ತೆಗೆ ಮೈಸೂರು ಕಾಂಗ್ರೆಸ್ ಮುಖಂಡರು ಸಗಣಿ ನೀರು ಹಾಕಿ ಸ್ವಚ್ಛಗೊಳಿಸುವ ಮೂಲಕ ಬಿಜೆಪಿಯನ್ನು ವ್ಯಂಗ್ಯ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ಕಾಂಗ್ರೆಸ್ ಮುಖಂಡ ಕಂಸಾಳೆ ರವಿ, ಚುನಾವಣೆಗೂ ಮುನ್ನ ಮೈಸೂರಿನ ರಾಜ ಮಾರ್ಗದಲ್ಲಿ ಭರ್ಜರಿ ರೋಡ್ ಶೋ ಮೋದಿ ನಡೆಸಿದ್ದರು. ಅಂಬಾರಿ ಹಾದು ಹೋಗುವ ರಾಜ ಮಾರ್ಗದಲ್ಲಿ ಮೋದಿ ರೋಡ್ ಶೋ ಮಾಡಿದ್ದೆ ದೊಡ್ಡ ತಪ್ಪು. ಇದು ರಾಜ ಮನೆತನಕ್ಕೆ ಮಾಡಿದ ಅಪಮಾನ.ಅಂಬಾರಿ ಬಿಟ್ಟರೆ ಇನ್ಯಾವುದೇ ದೊಡ್ಡ ಮೆರವಣಿಗೆ ಇಲ್ಲಿ ಮಾಡಿರಲಿಲ್ಲ. ಆದರೆ ಹಿಂದುತ್ವದ ಹೆಸರೇಳುವ ಬಿಜೆಪಿಯವರು ನಾಡಹಬ್ಬಕ್ಕೆ ಅಪಮಾನ ಆಗುವ ಹಾಗೇ ರೋಡ್ ಶೋ ಮಾಡಿದ್ದಾರೆ. ಹಾಗಾಗಿ ಮೈಸೂರು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಿದೆ. ಈ ರಸ್ತೆಗೆ ಆಗಿರುವ ಕೊಳೆಯನ್ನು ತೊಳೆಯಲು ಸಗಣಿ ನೀರು ಹಾಕಿ ಸ್ವಚ್ಛ ಮಾಡುತ್ತಿದ್ದೇವೆ ಎಂದು ಟೀಕಿಸಿದರು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…