ಮೈಸೂರು

ಸಿದ್ದರಾಮಯ್ಯ ಜೊತೆಗೆ ಬಿಜೆಪಿ ಹಿರಿಯರು ಷಾಮೀಲು : ಪ್ರತಾಪ್ ಸಿಂಹ ಹೀಗೆ ಗುಡುಗಿದ್ದು ಯಾರ ಮೇಲೆ?

ಮೈಸೂರು : ‘ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿಯ ಅತಿರಥ ಮಹಾರಥರೇ ಷಾಮೀಲಾಗಿರಬಹುದು” ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ತಮ್ಮ ಪಕ್ಷದ ಹಿರಿಯ ನಾಯಕರ ವಿರುದ್ಧವೇ ಪ್ರತಾಪ್ ಸಿಂಹ ಘರ್ಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿರುವಂತೆ ಕಾಣುತ್ತದೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ಕೂಡಲೇ ಅರ್ಕಾವತಿ ಹಗರಣ, ಡಿ ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ಮುಂತಾದ ಪ್ರಕರಣಗಳನ್ನು ತೋರಿಸಿ, ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಾರೆ.ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಬೆದರಿಕೆಯನ್ನು ಹಾಕುತ್ತಾರೆ. ಯಾರೂ ಯಾರ ವಿರುದ್ಧವೂ ತನಿಖೆ ಮಾಡಲ್ಲ. ಅದನ್ನು ನೋಡಿದರೆ, ಎರಡೂ ಪಕ್ಷದ ಹಿರಿಯ ನಾಯಕರು ಪರಸ್ಪರ ಹೊಂದಾಣಿಕೆ ರಾಜಕೀಯವನ್ನು ಮಾಡುತ್ತಿದ್ದಾರೆಂಬ ಅನುಮಾನಗಳು ಮೂಡುತ್ತಿವೆ” ಎಂದು ಅವರು ಹೇಳಿದ್ದಾರೆ.

ತಮ್ಮ ಮಾತನ್ನು ಮುಂದುವರಿಸಿದ ಅವರು, “ನೀವು (ಕಾಂಗ್ರೆಸ್) ಅಧಿಕಾರಕ್ಕೆ ಬಂದ ತಕ್ಷಣ ನಮ್ಮವರನ್ನು ಹೆದರಿಸುತ್ತೀರಿ. ನಮ್ಮವರು ಅಧಿಕಾರಕ್ಕೆ ಬಂದ ತಕ್ಷಣ ನಿಮ್ಮವರನ್ನು ಹೆದರಿಸುತ್ತಾರೆ. ಇದೆಲ್ಲವೂ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇರಬಹುದೇ’’ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

“ಇಂಥ ಹೊಂದಾಣಿಕೆ ರಾಜಕೀಯವು, ನಿನಗೆ ತುರಿಕೆಯಾದಾಗ ನಾನು ನಿನ್ನ ಬೆನ್ನು ಕೆರೆಯುತ್ತೇನೆ. ನನಗೆ ತುರಿಕೆಯಾದಾಗ ನೀನು ನನ್ನ ಬೆನ್ನು ಕೆರಿ ಎನ್ನುವಂಥ ಹೊಂದಾಣಿಕೆಯ ರಾಜಕೀಯ ಈಗ ಚಾಲ್ತಿಯಲ್ಲಿದೆಯೇನೋ ಎಂದೆನಿಸುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಎಂದಿಗೂ ಹೀಗೆ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡಲ್ಲ. ಕೇವಲ ನಿಮ್ಮಂಥ ಹಿರಿಯ ನಾಯಕರೇ ಇಂಥ ರಾಜಕೀಯ ಮಾಡೋದು’’ ಎಂದು ಅವರು ಚಾಟಿ ಬೀಸಿದ್ದಾರೆ.

ಸಿಂಹ ಸಿಟ್ಟಿಗೆ ಕಾರಣವೇನು? : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಗ್ಯಾರಂಟಿಗಳ ಜಾರಿ ಬಗ್ಗೆಯಾಗಲಿ, ಗ್ಯಾರಂಟಿಗಳ ಗೊಂದಲಗಳ ಬಗ್ಗೆಯಾಗಲೀ ಬಿಜೆಪಿಯ ಯುವ ನಾಯಕರಾದ ಸಿ.ಟಿ. ರವಿ, ಪ್ರತಾಪ್ ಸಿಂಹ ಮುಂತಾದವರು ಬಹಿರಂಗವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅತ್ತ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್ ಅವರುಗಳೂ ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಅತಿ ಹಿರಿಯ ನಾಯಕರು ಈ ವಿಚಾರಗಳಲ್ಲಿ ತುಟಿಪಿಟಕ್ಕೆನ್ನುತ್ತಿಲ್ಲ. ಇದೇ ಕಾರಣಕ್ಕಾಗಿ, ಹೊಂದಾಣಿಕೆ ರಾಜಕೀಯ ಇರಬಹುದು ಎಂದು ಚಿಕ್ಕಮಗಳೂರಿನ ಮಾಜಿ ಶಾಸಕ ಸಿ.ಟಿ. ರವಿ ಕೆಲ ದಿನಗಳ ಹಿಂದೆ ಟೀಕಿಸಿದ್ದರು. ಈಗ ಪ್ರತಾಪ್ ಸಿಂಹ ಕೂಡ ಆ ಟೀಕೆಗೆ ದನಿಗೂಡಿಸಿದ್ದಾರೆ.

‘ಈಗಲೂ ಆ ಮಾತಿಗೆ ಬದ್ಧ’ : ತಮ್ಮ ಮಾತಿನ ಲಹರಿಯನ್ನು ಕಾಂಗ್ರೆಸ್ ಕಡೆಗೆ ತಿರುಗಿಸಿದ ಅವರು, ನೀವು (ಕಾಂಗ್ರೆಸ್) ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟ್ ಲಂಚದ ಆರೋಪ ಮಾಡುತ್ತಿದ್ದೀರಿ. ಅದನ್ನೀಗ ಸಾಬೀತುಪಡಿಸಿ ಎಂದು ಸವಾಲು ಹಾಕಿದರು. 40 ಪರ್ಸೆಂಟ್ ಲಂಚ ಪಡೆಯುತ್ತಿದ್ದವರನ್ನು ಹಿಡಿದು ನೀವು ಶಿಕ್ಷೆ ಕೊಡಿಸಿದ್ದೇ ಆದಲ್ಲಿ, ನಮ್ಮ ಪಕ್ಷವನ್ನು ಸ್ವಚ್ಛಗೊಳಿಸಿದ್ದಕ್ಕಾಗಿ ನಿಮ್ಮ (ಕಾಂಗ್ರೆಸ್ ನಾಯಕರ) ಪಾದಕ್ಕೆ ನಮಸ್ಕಾರ ಮಾಡಿ, ನಿಮ್ಮ ಪಾದ ಪೂಜೆ ಮಾಡುತ್ತೇನೆ. ಈ ಮಾತನ್ನು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಅವರು ಪುನರುಚ್ಛರಿಸಿದ್ದಾರೆ.

lokesh

Recent Posts

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

16 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

38 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

54 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago

ಓದುಗರ ಪತ್ರ: ನಾರಾಯಣಸ್ವಾಮಿಯವರು ಜವಾಬ್ದಾರಿಯುತವಾಗಿ ವರ್ತಿಸಲಿ

ದಲಿತ ಸಮುದಾಯಕ್ಕೆ ಮೀಸಲಿಟ್ಟಿದ್ದ ಹಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೇರೆ ಖಾತೆಗೆ ವರ್ಗಾವಣೆ ಮಾಡಿಸಿದ್ದಾರೆ. ಹೀಗೆ ದಲಿತ ಸಮುದಾಯಕ್ಕೆ ಅನ್ಯಾಯ ಮಾಡಿದ್ದಕ್ಕಾಗಿ…

4 hours ago