ಮೈಸೂರು

ಸಿದ್ದರಾಮಯ್ಯ ಜೊತೆಗೆ ಬಿಜೆಪಿ ಹಿರಿಯರು ಷಾಮೀಲು : ಪ್ರತಾಪ್ ಸಿಂಹ ಹೀಗೆ ಗುಡುಗಿದ್ದು ಯಾರ ಮೇಲೆ?

ಮೈಸೂರು : ‘ರಾಜ್ಯದ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿದ್ದು, ಯಾರ ಮೇಲೆ ಯಾರೂ ಆರೋಪ ಮಾಡದಂತೆ ಒಂದು ಗೌಪ್ಯ ಒಡಂಬಡಿಕೆ ಮಾಡಿಕೊಂಡಂತೆ ವರ್ತಿಸುತ್ತಿದ್ದಾರೆ. ಬಹುಶಃ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿಯ ಅತಿರಥ ಮಹಾರಥರೇ ಷಾಮೀಲಾಗಿರಬಹುದು” ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ತಮ್ಮ ಪಕ್ಷದ ಹಿರಿಯ ನಾಯಕರ ವಿರುದ್ಧವೇ ಪ್ರತಾಪ್ ಸಿಂಹ ಘರ್ಜಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಪರಸ್ಪರ ಹೊಂದಾಣಿಕೆ ಮಾಡಿಕೊಂಡಿರುವಂತೆ ಕಾಣುತ್ತದೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ಕೂಡಲೇ ಅರ್ಕಾವತಿ ಹಗರಣ, ಡಿ ನೋಟಿಫಿಕೇಶನ್, ಕೆಂಪಣ್ಣ ಆಯೋಗದ ವರದಿ ಮುಂತಾದ ಪ್ರಕರಣಗಳನ್ನು ತೋರಿಸಿ, ಕಾಂಗ್ರೆಸ್ ನಾಯಕರನ್ನು ಹೆದರಿಸುತ್ತಾರೆ.ಕಾಂಗ್ರೆಸ್ಸಿನವರು ಅಧಿಕಾರಕ್ಕೆ ಬಂದ ಮೇಲೆ ಬಿಜೆಪಿ ಸರ್ಕಾರದಲ್ಲಿ ಕೇಳಿ ಬಂದಿದ್ದ ಆರೋಪಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವ ಬೆದರಿಕೆಯನ್ನು ಹಾಕುತ್ತಾರೆ. ಯಾರೂ ಯಾರ ವಿರುದ್ಧವೂ ತನಿಖೆ ಮಾಡಲ್ಲ. ಅದನ್ನು ನೋಡಿದರೆ, ಎರಡೂ ಪಕ್ಷದ ಹಿರಿಯ ನಾಯಕರು ಪರಸ್ಪರ ಹೊಂದಾಣಿಕೆ ರಾಜಕೀಯವನ್ನು ಮಾಡುತ್ತಿದ್ದಾರೆಂಬ ಅನುಮಾನಗಳು ಮೂಡುತ್ತಿವೆ” ಎಂದು ಅವರು ಹೇಳಿದ್ದಾರೆ.

ತಮ್ಮ ಮಾತನ್ನು ಮುಂದುವರಿಸಿದ ಅವರು, “ನೀವು (ಕಾಂಗ್ರೆಸ್) ಅಧಿಕಾರಕ್ಕೆ ಬಂದ ತಕ್ಷಣ ನಮ್ಮವರನ್ನು ಹೆದರಿಸುತ್ತೀರಿ. ನಮ್ಮವರು ಅಧಿಕಾರಕ್ಕೆ ಬಂದ ತಕ್ಷಣ ನಿಮ್ಮವರನ್ನು ಹೆದರಿಸುತ್ತಾರೆ. ಇದೆಲ್ಲವೂ ಅಡ್ಜಸ್ಟ್ಮೆಂಟ್ ಪಾಲಿಟಿಕ್ಸ್ ಇರಬಹುದೇ’’ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

“ಇಂಥ ಹೊಂದಾಣಿಕೆ ರಾಜಕೀಯವು, ನಿನಗೆ ತುರಿಕೆಯಾದಾಗ ನಾನು ನಿನ್ನ ಬೆನ್ನು ಕೆರೆಯುತ್ತೇನೆ. ನನಗೆ ತುರಿಕೆಯಾದಾಗ ನೀನು ನನ್ನ ಬೆನ್ನು ಕೆರಿ ಎನ್ನುವಂಥ ಹೊಂದಾಣಿಕೆಯ ರಾಜಕೀಯ ಈಗ ಚಾಲ್ತಿಯಲ್ಲಿದೆಯೇನೋ ಎಂದೆನಿಸುತ್ತಿದೆ. ನಮ್ಮ ಪಕ್ಷದ ಕಾರ್ಯಕರ್ತರು ಎಂದಿಗೂ ಹೀಗೆ ಅಡ್ಜಸ್ಟ್ ಮೆಂಟ್ ಪಾಲಿಟಿಕ್ಸ್ ಮಾಡಲ್ಲ. ಕೇವಲ ನಿಮ್ಮಂಥ ಹಿರಿಯ ನಾಯಕರೇ ಇಂಥ ರಾಜಕೀಯ ಮಾಡೋದು’’ ಎಂದು ಅವರು ಚಾಟಿ ಬೀಸಿದ್ದಾರೆ.

ಸಿಂಹ ಸಿಟ್ಟಿಗೆ ಕಾರಣವೇನು? : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಗ್ಯಾರಂಟಿಗಳ ಜಾರಿ ಬಗ್ಗೆಯಾಗಲಿ, ಗ್ಯಾರಂಟಿಗಳ ಗೊಂದಲಗಳ ಬಗ್ಗೆಯಾಗಲೀ ಬಿಜೆಪಿಯ ಯುವ ನಾಯಕರಾದ ಸಿ.ಟಿ. ರವಿ, ಪ್ರತಾಪ್ ಸಿಂಹ ಮುಂತಾದವರು ಬಹಿರಂಗವಾಗಿ ಟೀಕೆಗಳನ್ನು ಮಾಡುತ್ತಿದ್ದಾರೆ. ಅತ್ತ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಸನಗೌಡ ಪಾಟೀಲ ಯತ್ನಾಳ್ ಅವರುಗಳೂ ಟೀಕಾ ಪ್ರಹಾರ ಮಾಡುತ್ತಿದ್ದಾರೆ. ಆದರೆ, ಬಿಜೆಪಿ ಅತಿ ಹಿರಿಯ ನಾಯಕರು ಈ ವಿಚಾರಗಳಲ್ಲಿ ತುಟಿಪಿಟಕ್ಕೆನ್ನುತ್ತಿಲ್ಲ. ಇದೇ ಕಾರಣಕ್ಕಾಗಿ, ಹೊಂದಾಣಿಕೆ ರಾಜಕೀಯ ಇರಬಹುದು ಎಂದು ಚಿಕ್ಕಮಗಳೂರಿನ ಮಾಜಿ ಶಾಸಕ ಸಿ.ಟಿ. ರವಿ ಕೆಲ ದಿನಗಳ ಹಿಂದೆ ಟೀಕಿಸಿದ್ದರು. ಈಗ ಪ್ರತಾಪ್ ಸಿಂಹ ಕೂಡ ಆ ಟೀಕೆಗೆ ದನಿಗೂಡಿಸಿದ್ದಾರೆ.

‘ಈಗಲೂ ಆ ಮಾತಿಗೆ ಬದ್ಧ’ : ತಮ್ಮ ಮಾತಿನ ಲಹರಿಯನ್ನು ಕಾಂಗ್ರೆಸ್ ಕಡೆಗೆ ತಿರುಗಿಸಿದ ಅವರು, ನೀವು (ಕಾಂಗ್ರೆಸ್) ನಮ್ಮ ಸರ್ಕಾರದ ವಿರುದ್ಧ 40 ಪರ್ಸೆಂಟ್ ಲಂಚದ ಆರೋಪ ಮಾಡುತ್ತಿದ್ದೀರಿ. ಅದನ್ನೀಗ ಸಾಬೀತುಪಡಿಸಿ ಎಂದು ಸವಾಲು ಹಾಕಿದರು. 40 ಪರ್ಸೆಂಟ್ ಲಂಚ ಪಡೆಯುತ್ತಿದ್ದವರನ್ನು ಹಿಡಿದು ನೀವು ಶಿಕ್ಷೆ ಕೊಡಿಸಿದ್ದೇ ಆದಲ್ಲಿ, ನಮ್ಮ ಪಕ್ಷವನ್ನು ಸ್ವಚ್ಛಗೊಳಿಸಿದ್ದಕ್ಕಾಗಿ ನಿಮ್ಮ (ಕಾಂಗ್ರೆಸ್ ನಾಯಕರ) ಪಾದಕ್ಕೆ ನಮಸ್ಕಾರ ಮಾಡಿ, ನಿಮ್ಮ ಪಾದ ಪೂಜೆ ಮಾಡುತ್ತೇನೆ. ಈ ಮಾತನ್ನು ಹಿಂದೆಯೂ ಹೇಳಿದ್ದೆ, ಈಗಲೂ ಹೇಳುತ್ತಿದ್ದೇನೆ ಎಂದು ಅವರು ಪುನರುಚ್ಛರಿಸಿದ್ದಾರೆ.

lokesh

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

14 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago