ಮೈಸೂರು

ಸಿದ್ದರಾಮಯ್ಯಗೆ ಈಗ ಹಿಂದೂ ದೇವರ ನೆನಪಾಗಿದೆ: ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟು ಎದುರಾದಾಗಿನಿಂದ ಚಾಮುಂಡಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿದ್ದರಾಮಯ್ಯಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಇನ್ಮುಂದೆ ಸಿದ್ದರಾಮಯ್ಯ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಮಂಗಳವಾರ ನಗರದ ಜನಲದರ್ಶಿನಿ ಅತಿಥಿಗೃಹದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟದ ಜಿಲ್ಲೆಗಳ ರೈತರ ಪಿತ್ರಾರ್ಜಿತ ಆಸ್ತಿಗಳಿಗೆ ವಕ್ಫ್‌ ಮಂಡಳಿಯಿಂದ ನೋಟಿಸ್‌ ಬಂದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮುಸ್ಲಿಮರು ವಕ್ಫ್‌ ಆಸ್ತಿ ಎನ್ನುತ್ತಾರಲ್ಲ, ಅವರಿಗೆ ಯಾರಿಂದ ಬಂತು ಈ ಆಸ್ತಿ? ಅಕ್ಬರ್‌, ಔರಂಗಜೇಬ್‌, ಜಿನ್ನಾ ಕೊಟ್ಟ ಆಸ್ತಿಯೇ ಇದು? ಪ್ರತ್ಯೇಕ ಮುಸ್ಲಿಮರಿಗೆ ಎಲ್ಲಿಂದ ಬಂತು? ಅವರಿಗೆ ಯಾರಿಂದ ಬಳುವಳಿ ಬಂದಿದ್ದು ಎಂದು ಪ್ರಶ್ನಿಸಿದರು.

ಕೇವಲ ವಿಜಯಪುರ ಮಾತ್ರವಲ್ಲ. ಹೂಣಸೂರಿನ ಗಣೇಶ ದೇವಸ್ಥಾನ, ಚಿಕ್ಕಮಗಳೂರಿನ ಖಾಸಗಿ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಹೇಳಿ ಕಬಳಿಸುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿನ 1.25ಲಕ್ಷ ಎಕರೆ ಜಮೀನು ತಮಗೆ ಸೇರಿದ್ದು ಎಂದು ವಕ್ಫ್‌ ಮಂಡಳಿ ವಾದಿಸುತ್ತಿದೆ. ಆದರೆ ಯಾವ ಮುಸಲ್ಮಾನರಿಗೂ ಕೃಷಿಗೆ ಜಮೀನು ಬಿಟ್ಟುಕೊಟ್ಟಿಲ್ಲ. ಬದಲಾಗಿ ರಿಯಲ್‌ ಎಸ್ಟೇಟ್‌ ದಂದೆ ನಡೆಯುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರ ಕೂಡಲೇ ವಕ್ಫ್‌ ಕಾಯ್ದೆಯನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮೊದಲು ಕೇಸರಿ ಶಾಲು ಹಾಕಿದರೆ ಕಿತ್ತು ಬಿಸಾಡುತ್ತಿದ್ದರು. ಮುಡಾ ಪ್ರಕರಣ ನಂತರ ಹಿಂದೂ ಧರ್ಮದ ಮೇಲೆ ಅವರಿಗೆ ನಂಬಿಕೆ ಬಂದಿದೆ. ನಮ್ಮ ದೇವರ ಮೇಲೆ ಶ್ರದ್ಧೆ, ಭಕ್ತಿ ಕೂಡ ಬಂದಿದೆ. ಸಿದ್ದರಾಮಯ್ಯ ಅವರನ್ನು ಕಾಪಾಡುವುದು ನಮ್ಮ ಹಿಂದೂಗಳೇ ಎಂದು ಹೇಳಿದರು.

ಯತ್ನಾಳ್‌ ಬಿಜೆಪಿಯ ನೇತಾರ
ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ ರಾಜ್ಯ ಬಿಜೆಪಿಯ ಜನಪ್ರಿಯ ನೇತಾರ. ವಕ್ಫ್‌ ವಿರುದ್ಧ ಮೊದಲು ಧ್ವನಿ ಎತ್ತಿದ್ದು ಅವರೇ. ವಿಜಯಪರದಲ್ಲಿ ರೈತರ ಅಹವಾಲು ಆಲಿಸಲಿರುವ ಬಿಜೆಪಿ ತಂಡದಲ್ಲಿ ಕಣ್ತಿಪ್ಪಿನಿಂದ ಅವರ ಹೆಸರು ಬಿಟ್ಟು ಹೋಗಿದ್ದು, ಇದೀಗ ಸರಿಪಡಿಸಲಾಗಿದೆ. ಅವರ ನೇತೃತ್ವದಲ್ಲಿ ನವೆಂಬರ್ 3-4 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಪ್ರಶ್ನಾರ್ಹ

ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…

1 hour ago

ಓದುಗರ ಪತ್ರ: ಎನ್‌ಕೌಂಟರ್ ನಿಗೂಢತೆ?

ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮದಲ್ಲಿ ಅರಣ್ಯ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಮೃತಪಟ್ಟಿರುವ ಪ್ರಕರಣ ಹಲವಾರು…

1 hour ago

ಓದುಗರ ಪತ್ರ: ಜಂಬೂಸವಾರಿಯ ಹೊಸ ಸಾರಥಿ ಯಾರು?

ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಯಲ್ಲಿ ೭೫೦ ಕೆಜಿ ತೂಕದ ಅಂಬಾರಿ ಹೊತ್ತು ಸಾಗುತ್ತಿದ್ದ ಅಭಿಮನ್ಯು ಆನೆ ಇನ್ನುಮುಂದೆ ಬರುವುದಿಲ್ಲ…

1 hour ago

ಧ್ವನಿಹೀನರಿಗೆ ಧ್ವನಿಯಾಗಿದ್ದ ದೇವರಾಜ ಅರಸು

ಎಚ್.ಹಾಲಪ್ಪ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಯಂತಿ ದೇಶದಲ್ಲಿ ಜನಪ್ರತಿನಿಧಿಗಳ ಸಂಖ್ಯೆ ಸಾವಿರಾರು. ಆದರೆ, ಕಾಲದ ಪರೀಕ್ಷೆಯಲ್ಲಿ ಮುತ್ಸದ್ದಿ…

1 hour ago

ನೀರಿಲ್ಲದಿದ್ದರೂ ಭರ್ತಿಯಾಗುತ್ತಿದೆ ಕಸುವಿನಹಳ್ಳಿ ಕೆರೆ!

ಎಸ್.ಎಸ್.ಭಟ್ ಸುತ್ತಲಿನ ಕ್ರಷರ್‌ನಿಂದ ತಂದು ಹಾಕುತ್ತಿರುವ ರಾಶಿ ದೂಳಿನಿಂದ ತುಂಬುತ್ತಿದೆ ಕೆರೆ; ಗ್ರಾಮಸ್ಥರ ಆಕ್ರೋಶ ನಂಜನಗೂಡು: ಮಳೆ ಬಂದರೆ ನೀರಿನಿಂದ…

1 hour ago