ಮೈಸೂರು

ಸಿದ್ದರಾಮಯ್ಯಗೆ ಈಗ ಹಿಂದೂ ದೇವರ ನೆನಪಾಗಿದೆ: ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟು ಎದುರಾದಾಗಿನಿಂದ ಚಾಮುಂಡಿ, ಹಾಸನಾಂಬೆ ತಾಯಿ ನೆನಪಾಗಿದ್ದಾರೆ. ಸಿದ್ದರಾಮಯ್ಯಗೆ ಕಷ್ಟ ಬಂದಾಗ ಅವರ ಸಹಾಯಕ್ಕೆ ಬರುವುದು ನಮ್ಮ ದೇವಾನುದೇವತೆಗಳೇ ಹೊರತು ಬೇರೆ ಧರ್ಮದವರಲ್ಲ. ಹೀಗಾಗಿ ಇನ್ಮುಂದೆ ಸಿದ್ದರಾಮಯ್ಯ ಹಿಂದೂಗಳ ಪರ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ಹೇಳಿದರು.

ಮಂಗಳವಾರ ನಗರದ ಜನಲದರ್ಶಿನಿ ಅತಿಥಿಗೃಹದಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟದ ಜಿಲ್ಲೆಗಳ ರೈತರ ಪಿತ್ರಾರ್ಜಿತ ಆಸ್ತಿಗಳಿಗೆ ವಕ್ಫ್‌ ಮಂಡಳಿಯಿಂದ ನೋಟಿಸ್‌ ಬಂದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಮುಸ್ಲಿಮರು ವಕ್ಫ್‌ ಆಸ್ತಿ ಎನ್ನುತ್ತಾರಲ್ಲ, ಅವರಿಗೆ ಯಾರಿಂದ ಬಂತು ಈ ಆಸ್ತಿ? ಅಕ್ಬರ್‌, ಔರಂಗಜೇಬ್‌, ಜಿನ್ನಾ ಕೊಟ್ಟ ಆಸ್ತಿಯೇ ಇದು? ಪ್ರತ್ಯೇಕ ಮುಸ್ಲಿಮರಿಗೆ ಎಲ್ಲಿಂದ ಬಂತು? ಅವರಿಗೆ ಯಾರಿಂದ ಬಳುವಳಿ ಬಂದಿದ್ದು ಎಂದು ಪ್ರಶ್ನಿಸಿದರು.

ಕೇವಲ ವಿಜಯಪುರ ಮಾತ್ರವಲ್ಲ. ಹೂಣಸೂರಿನ ಗಣೇಶ ದೇವಸ್ಥಾನ, ಚಿಕ್ಕಮಗಳೂರಿನ ಖಾಸಗಿ ಆಸ್ತಿಯನ್ನು ವಕ್ಫ್‌ ಆಸ್ತಿ ಎಂದು ಹೇಳಿ ಕಬಳಿಸುವ ಪ್ರಯತ್ನ ನಡೆದಿದೆ. ರಾಜ್ಯದಲ್ಲಿನ 1.25ಲಕ್ಷ ಎಕರೆ ಜಮೀನು ತಮಗೆ ಸೇರಿದ್ದು ಎಂದು ವಕ್ಫ್‌ ಮಂಡಳಿ ವಾದಿಸುತ್ತಿದೆ. ಆದರೆ ಯಾವ ಮುಸಲ್ಮಾನರಿಗೂ ಕೃಷಿಗೆ ಜಮೀನು ಬಿಟ್ಟುಕೊಟ್ಟಿಲ್ಲ. ಬದಲಾಗಿ ರಿಯಲ್‌ ಎಸ್ಟೇಟ್‌ ದಂದೆ ನಡೆಯುತ್ತಿದೆ. ಹೀಗಾಗಿ, ಕೇಂದ್ರ ಸರ್ಕಾರ ಕೂಡಲೇ ವಕ್ಫ್‌ ಕಾಯ್ದೆಯನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಮೊದಲು ಕೇಸರಿ ಶಾಲು ಹಾಕಿದರೆ ಕಿತ್ತು ಬಿಸಾಡುತ್ತಿದ್ದರು. ಮುಡಾ ಪ್ರಕರಣ ನಂತರ ಹಿಂದೂ ಧರ್ಮದ ಮೇಲೆ ಅವರಿಗೆ ನಂಬಿಕೆ ಬಂದಿದೆ. ನಮ್ಮ ದೇವರ ಮೇಲೆ ಶ್ರದ್ಧೆ, ಭಕ್ತಿ ಕೂಡ ಬಂದಿದೆ. ಸಿದ್ದರಾಮಯ್ಯ ಅವರನ್ನು ಕಾಪಾಡುವುದು ನಮ್ಮ ಹಿಂದೂಗಳೇ ಎಂದು ಹೇಳಿದರು.

ಯತ್ನಾಳ್‌ ಬಿಜೆಪಿಯ ನೇತಾರ
ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ ರಾಜ್ಯ ಬಿಜೆಪಿಯ ಜನಪ್ರಿಯ ನೇತಾರ. ವಕ್ಫ್‌ ವಿರುದ್ಧ ಮೊದಲು ಧ್ವನಿ ಎತ್ತಿದ್ದು ಅವರೇ. ವಿಜಯಪರದಲ್ಲಿ ರೈತರ ಅಹವಾಲು ಆಲಿಸಲಿರುವ ಬಿಜೆಪಿ ತಂಡದಲ್ಲಿ ಕಣ್ತಿಪ್ಪಿನಿಂದ ಅವರ ಹೆಸರು ಬಿಟ್ಟು ಹೋಗಿದ್ದು, ಇದೀಗ ಸರಿಪಡಿಸಲಾಗಿದೆ. ಅವರ ನೇತೃತ್ವದಲ್ಲಿ ನವೆಂಬರ್ 3-4 ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಿಡದಿ ರೈತರ ಪರ ನನ್ನ ಹೋರಾಟ ಇಂದಿನಿಂದ ಆರಂಭ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಘೋಷಣೆ

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…

14 hours ago

ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವು

ನವೀನ್‌ ಕುಮಾರ್:‌ ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…

14 hours ago

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

15 hours ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

15 hours ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

15 hours ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

15 hours ago