ಮೈಸೂರು: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾದ ಬೆನ್ನಲ್ಲೇ ಇದೀಗ ಮತ್ತೊಂದು ಸಂಕಷ್ಟ ಸಿದ್ದರಾಮಯ್ಯ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಸೋಮವಾರ ಅಥವಾ ಮಂಗಳವಾರ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾದ ನಂತರ ಪ್ರತಿಕ್ರಿಯಿಸಿದ ಸ್ನೇಹಮಯಿ ಕೃಷ್ಣ, ಕೋರ್ಟ್ ಆದೇಶದ ಮೇರೆಗೆ ಎಫ್ಐಆರ್ ದಾಖಲಿಸಿದ್ದೇನೆ. ಒಬ್ಬ ಮುಖ್ಯಮಂತ್ರಿ ವಿರುದ್ಧ ಒಬ್ಬ ಸಾಮಾನ್ಯ ಪ್ರಜೆ ರಾಜ್ಯದ ಭ್ರಷ್ಟ ಸಿಎಂಗೆ ಶಿಕ್ಷೆ ಕೊಡಿಸಬಹುದು ಎಂಬುದಕ್ಕೆ ಮುಡಾ ಹಗರಣವೇ ಸಾಕ್ಷಿಯಾಗಿದೆ. ಇದು ನಮ್ಮ ಹೋರಾಟಕ್ಕೆ ಸಿಕ್ಕ ಜಯ . ಸಿಬಿಐ ತನಿಖೆ ಆಗುವವರೆಗು ಹೋರಾಟ ಮುಂದುವರೆಯುತ್ತದೆ ಎಂದರು.
ಎಸ್.ಪಿ ಉದೇಶ್ ವಿರುದ್ಧ ಕಾನೂನು ಹೋರಾಟ
ಮೈಸೂರು ಲೋಕಾಯುಕ್ತ ಎಸ್.ಪಿ.ಉದೇಶ್ ವಿರುದ್ಧ ಕಾನೂನು ಹೋರಾಟ ಖಚಿತ. ಉದೇಶ್ ಅವರು ನ್ಯಾಯಾಲಯದ ಆದೇಶಕ್ಕೆ ಪೂರಕವಾಗಿ ನಡೆದುಕೊಂಡಿಲ್ಲ. ಮೇಲಾಧಿಕಾರಿ ಒತ್ತಡ ಮತ್ತು ಆದೇಶದ ನಂತರ ಈಗ ಎಫ್ಐಆರ್ ದಾಖಲು ಮಾಡಿಕೊಂಡಿದ್ದಾರೆ. ಅಲ್ಲದೇ ಅವರು ಕಾನೂನು ಬಾಹಿರವಾಗಿ ನಡೆದುಕೊಂಡಿದ್ದರಿಂದ ಇದಕ್ಕೆ ಶಿಕ್ಷೆಕೊಡಿಸುವುದು ಖಚಿತವಾಗಿದೆ ಎಂದರು.
ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…
ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…
ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…
ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…
ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…
ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…