siddaramaiah reaction about mysore sadhana samavesha
ಮೈಸೂರು : ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಯವರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ. ಆದರೆ ನಾವು ಚರ್ಚೆಗೆ ಸದಾ ಸಿದ್ದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಭ್ರಮೆ: ನಿನ್ನೆ ನಡೆದ ಮೈಸೂರಿನ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಡಿಸಿಎಂ ಗೆ ಅವಮಾನ ಮಾಡಿದೆ ಎಂದು ಬಿಜೆಪಿಯವರು ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಕಾರ್ಯಕ್ರಮದಲ್ಲಿ ಇರುವವರಿಗೆ ಸ್ವಾಗತ ಮಾಡುವುದು ಪರಿಪಾಠ. ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಕಾರ್ಯಕ್ರಮದಲ್ಲಿ ಆ ವೇಳೆಯಲ್ಲಿ ಇರದಿದ್ದ ಕಾರಣ, ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದ್ದರಿಂದ, ಇದರಲ್ಲಿ ಅವಮಾನ ಮಾಡುವ ಪ್ರಶ್ನೆಯಿಲ್ಲ. ಬಿಜೆಪಿಯವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ನನ್ನ ಹಾಗೂ ಡಿಸಿಎಂ ನಡುವೆ ಒಡಕುಂಟು ಮಾಡುವ ಉದ್ದೇಶದಿಂದ ಬಿಜೆಪಿಯವರು ಇಂತಹ ಹೇಳಿಕೆಗಳನ್ನು ನೀಡುತ್ತಾರೆ. ಇದರಿಂದ ರಾಜಕೀಯ ಲಾಭವಾಗಬಹುದೆಂಬ ಭ್ರಮೆ ಬಿಜೆಪಿಯವರಿಗಿದ್ದು, ಇದು ಸದಾ ಭ್ರಮೆಯಾಗಿಯೇ ಇರಲಿದೆ ಎಂದರು.
ಡಿಜಿಟಲ್ ಪೇಮಂಟ್-ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ತೀರ್ಮಾನ: ರಾಜ್ಯದ ಸಣ್ಣ ವ್ಯಾಪಾರಿಗಳಿಗೆ ಡಿಜಿಟಲ್ ಪೇಮೆಂಟ್ನಿಂದ ತೆರಿಗೆ ನೋಟೀಸ್ ನೀಡುತ್ತಿದೆ ಎಂಬ ಕೂಗೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಿಎಸ್ಟಿ ಎಂಬುದನ್ನು ಕೇಂದ್ರ ಸರ್ಕಾರ ಮಾಡಿದ್ದು, ಜಿಎಸ್ಟಿ ಕೌನ್ಸಿಲ್ ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತದೆ. ಇದಕ್ಕೆ ರಾಜ್ಯಸರ್ಕಾರಗಳು ಜವಾಬ್ದಾರಿಯಿಲ್ಲ. ಆದಾಗ್ಯೂ ಈ ಬಗ್ಗೆ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ನಡೆಸಿ, ರಾಜ್ಯಸರ್ಕಾರದ ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು
ಕಾಂಗ್ರಸ್ ಗ್ಯಾರಂಟಿಗಳನ್ನು ಬಿಜೆಪಿ ಅನುಕರಿಸುತ್ತಿದೆ: ನಿನ್ನೆ ನಡೆದ ಸಾಧನಾ ಸಮಾವೇಶ ಬಿಜೆಪಿಯವರಿಗೆ ಉತ್ತರ ನೀಡಿದೆಯೇ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಸಂದರ್ಭದಲ್ಲಿ ವಿಜಯನಗರದಲ್ಲಿ ನಡೆದ ಸಮಾವೇಶದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದರು. ಇದು ಸರ್ಕಾರಕ್ಕೆ ಜನರ ಬೆಂಬಲವನ್ನು ಸೂಚಿಸುತ್ತದೆ. ಬಿಜೆಪಿಯವರು ಕೇವಲ ಸುಳ್ಳು ಹೇಳುತ್ತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಅನುಕರಿಸುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿಗಳಿಗಾಗಿ 52 ಸಾವಿರ ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದರು.
ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…
ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್ಕಾಂಗ್ಗೆ ಬಂದಾಗ…
ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …
ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ ಮಡಿಕೇರಿ:…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…
ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…