ಮೈಸೂರು

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿದ್ದರಾಮಯ್ಯ

ಮೈಸೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ (ಆ.9) ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

5 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

7 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

7 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

7 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

7 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

7 hours ago