ಮೈಸೂರು

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿದ್ದರಾಮಯ್ಯ

ಮೈಸೂರು: ಮನುವಾದಿಗಳು, ಜಾತಿವಾದಿಗಳು ಯಾವತ್ತೂ ಕೂಡ ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ದ್ವೇಷ ರಾಜಕಾರಣ, ಚುನಾಯಿತ ಸರ್ಕಾರಗಳನ್ನು ಉರುಳಿಸುವ ಬಿಜೆಪಿ, ಜೆಡಿಎಸ್‌ನ ಜನತಂತ್ರ ವಿರೋಧಿ ಸರ್ವಾಧಿಕಾರಿ ದುರಾಡಳಿತವನ್ನು ವಿರೋಧಿಸಿ ಮಹಾರಾಜ ಕಾಲೇಜು ಮೈದಾನದಲ್ಲಿ ಶುಕ್ರವಾರ (ಆ.9) ನಡೆದ ಬೃಹತ್ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದರು.

ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು. ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.

ದೇವರಾಜ ಅರಸು, ಬಂಗಾರಪ್ಪ ಅವರನ್ನೂ ಇವರು ಸಹಿಸಲಿಲ್ಲ. ಈಗ ನನ್ನನ್ನೂ ಸಹಿಸುತ್ತಿಲ್ಲ. ಜೆಡಿಎಸ್ ನ ದೇವೇಗೌಡರು ಮತ್ತು ಕುಮಾರಸ್ವಾಮಿ ಯಾವತ್ತೂ ಕೊಟ್ಟ ಮಾತಿನಂತೆ ನಡೆದುಕೊಳ್ಳುವವರಲ್ಲ. ಕುಮಾರಸ್ವಾಮಿ ಬಿಜೆಪಿ ಜೊತೆ ಸೇರಿ ಅಧಿಕಾರ ನಡೆಸಿದರೆ ನನ್ನ ಶವದ ಮೇಲೆ ನಡೆಸಬೇಕು ಎಂದು ದೇವೇಗೌಡರು ಹೇಳಿದ್ದರು. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುತ್ತೇನೆ ಎಂದು ಹೇಳಿದ್ದ ದೇವೇಗೌಡರೇ ಈಗ ಬಿಜೆಪಿ ಜೊತೆ ಶಾಮೀಲಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಾನು ರಾಜ್ಯದ ಜನರ ಆಶೀರ್ವಾದದಿಂದ ಎರಡು ಬಾರಿ ಉಪ ಮುಖ್ಯಮಂತ್ರಿಯಾಗಿದ್ದೀನಿ. ಎರಡು ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನನಗೆ ಇಷ್ಟೆಲ್ಲಾ ಅಧಿಕಾರ ಸಿಕ್ಕಾಗಲೂ ನನಗೆ ಹಣ ಮಾಡುವ ಆಸೆ ಬಂದಿಲ್ಲ, ನನ್ನ ಪತ್ನಿ ಇವತ್ತಿನವರೆಗೂ ಸಾರ್ವಜನಿಕವಾಗಿ ಕಾಣಿಸಿಲ್ಲ. ಎರಡು ಬಾರಿ ಸಿಎಂ ಆದರೂ ಪ್ರಮಾಣ ವಚನಕ್ಕೂ ಬರಲಿಲ್ಲ. ನಾವು ಭ್ರಷ್ಟಾಚಾರ ಮಾಡಲು ಸಾಧ್ಯವಿಲ್ಲ. ನಿಮ್ಮ ನಂಬಿಕೆಗೆ ದ್ರೋಹ ಎಸಗಲು ಸಾಧ್ಯವಿಲ್ಲ. ನಾನು ರಾಜಕೀಯದಲ್ಲಿ ಇರುವವರೆಗೂ ಯಾವತ್ತೂ ನಿಮ್ಮ ನಂಬಿಕೆಗೆ ದ್ರೋಹ ಬಗೆಯಲ್ಲ ಎಂದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

8 hours ago