ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಪಕ್ಷದ ಶಾಸಕರು ನಮ್ಮ ತಂದೆಯ ಪರವಾಗಿದ್ದಾರೆ. ಹೀಗಿರುವಾಗ, ಅವರನ್ನೇಕೆ ಕೆಳಗಿಳಿಸಲಾಗಿತ್ತದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೋ ಇಲ್ಲವೋ ಎಂಬ ಚರ್ಚೆಯೇ ಸರಿ ಇಲ್ಲ ಎಂದರು.
ತಲಾ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದು ವಿರೋಧ ಪಕ್ಷಗಳು ಸೃಷ್ಟಿಸಿರುವ ಚರ್ಚೆ. ಸೆಪ್ಟಂಬರ್ ರಾಜಕೀಯ ಕ್ರಾಂತಿ ಆಗುತ್ತದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ಕ್ರಾಂತಿ ಎಂದರೆ ಅದು ಮುಖ್ಯಮಂತ್ರಿ ಬದಲಾವಣೆ ಎಂದರ್ಥವಾ? ಯಾಕೆ ಎಲ್ಲವನ್ನೂ ಸಿ.ಎಂ ವಿಚಾರಕ್ಕೆ ಸೀಮಿತವಾಗಿ ನೋಡುತ್ತೀರಿ? ಬೇರೆ ವಿಷಯದಲ್ಲಿ ಕ್ರಾಂತಿ ಆಗಬಹುದು. ಅದೇನು ಎಂಬುದನ್ನು ಹೇಳಿದವರನ್ನೇ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ನಲ್ಲಿ ಮಾಸ್ಲೀಡರ್ ಆಗಿರುವ ಸಿದ್ದರಾಮಯ್ಯ ಅವರನ್ನು ನೈತಿಕವಾಗಿ ಕುಗ್ಗಿಸಿದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ ಎಂಬ ಕಾರಣಕ್ಕೆ ವಿರೋಧಪಕ್ಷದವರು ಟಾರ್ಗೆಟ್ ಮಾಡುತ್ತಿರುತ್ತಾರೆ. ಅವೆಲ್ಲವನ್ನೂ ಮೀರಿ ನಾವು ನಿಲ್ಲುತ್ತಿದ್ದೇವೆ ಎಂದು ತಿಳಿಸಿದರು.
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್ಸಿಇಆರ್ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…
ಅಹ್ಮದಾಬಾದ್ : ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ-20 ವಿಶ್ವಕಪ್ ಫೈನಲ್ ಪಂದ್ಯ…
ಮೈಸೂರು : 17 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಏನು ಮಾಡಿದ್ದಾರೆ ಎಂದು ಮಾಜಿ ಸಂಸದ…
ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…
ಟೆಹ್ರಾನ್ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…
ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…