ಮೈಸೂರು

ಮುಡಾ ಪ್ರಕರಣದ ಗೆಲುವಿನಿಂದಾಗಿ ಸಿದ್ದರಾಮಯ್ಯಗೆ ರಾಜಕೀಯವಾಗಿ ಶಕ್ತಿ ವೃದ್ಧಿ : ಯತೀಂದ್ರ ಸಿದ್ದರಾಮಯ್ಯ

ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ ಪಕ್ಷದ ಶಾಸಕರು ನಮ್ಮ ತಂದೆಯ ಪರವಾಗಿದ್ದಾರೆ. ಹೀಗಿರುವಾಗ, ಅವರನ್ನೇಕೆ ಕೆಳಗಿಳಿಸಲಾಗಿತ್ತದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೋ ಇಲ್ಲವೋ ಎಂಬ ಚರ್ಚೆಯೇ ಸರಿ ಇಲ್ಲ ಎಂದರು.

ತಲಾ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದು ವಿರೋಧ ಪಕ್ಷಗಳು ಸೃಷ್ಟಿಸಿರುವ ಚರ್ಚೆ. ಸೆಪ್ಟಂಬರ್‌ ರಾಜಕೀಯ ಕ್ರಾಂತಿ ಆಗುತ್ತದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ಕ್ರಾಂತಿ ಎಂದರೆ ಅದು ಮುಖ್ಯಮಂತ್ರಿ ಬದಲಾವಣೆ ಎಂದರ್ಥವಾ? ಯಾಕೆ ಎಲ್ಲವನ್ನೂ ಸಿ.ಎಂ ವಿಚಾರಕ್ಕೆ ಸೀಮಿತವಾಗಿ ನೋಡುತ್ತೀರಿ? ಬೇರೆ ವಿಷಯದಲ್ಲಿ ಕ್ರಾಂತಿ ಆಗಬಹುದು. ಅದೇನು ಎಂಬುದನ್ನು ಹೇಳಿದವರನ್ನೇ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್‌ನಲ್ಲಿ ಮಾಸ್‌ಲೀಡರ್‌ ಆಗಿರುವ ಸಿದ್ದರಾಮಯ್ಯ ಅವರನ್ನು ನೈತಿಕವಾಗಿ ಕುಗ್ಗಿಸಿದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ ಎಂಬ ಕಾರಣಕ್ಕೆ ವಿರೋಧಪಕ್ಷದವರು ಟಾರ್ಗೆಟ್‌ ಮಾಡುತ್ತಿರುತ್ತಾರೆ. ಅವೆಲ್ಲವನ್ನೂ ಮೀರಿ ನಾವು ನಿಲ್ಲುತ್ತಿದ್ದೇವೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

42 mins ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

6 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

6 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

6 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago