ಮೈಸೂರು : ಮುಡಾ ಪ್ರಕರಣದ ಗೆಲುವಿನಿಂದಾಗಿ ತಂದೆಗೆ ರಾಜಕೀಯವಾಗಿ ಶಕ್ತಿ ವೃದ್ಧಿಸಿರುವುದು ನಿಜ. ಅವರನ್ನು ನೈತಿಕವಾಗಿ ಕುಗ್ಗಿಸುವ ಪ್ರಯತ್ನ ನಡೆದಿತ್ತು. ಅದೀಗ ನಿವಾರಣೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ಶುಕ್ರವಾರ ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಪಕ್ಷದ ಶಾಸಕರು ನಮ್ಮ ತಂದೆಯ ಪರವಾಗಿದ್ದಾರೆ. ಹೀಗಿರುವಾಗ, ಅವರನ್ನೇಕೆ ಕೆಳಗಿಳಿಸಲಾಗಿತ್ತದೆ. ಸಿದ್ದರಾಮಯ್ಯ ಅಧಿಕಾರದಲ್ಲಿ ಮುಂದುವರಿಯುತ್ತಾರೆಯೋ ಇಲ್ಲವೋ ಎಂಬ ಚರ್ಚೆಯೇ ಸರಿ ಇಲ್ಲ ಎಂದರು.
ತಲಾ ಎರಡುವರೆ ವರ್ಷ ಅಧಿಕಾರ ಹಂಚಿಕೆಯಾಗಿದೆ ಎಂಬುದು ವಿರೋಧ ಪಕ್ಷಗಳು ಸೃಷ್ಟಿಸಿರುವ ಚರ್ಚೆ. ಸೆಪ್ಟಂಬರ್ ರಾಜಕೀಯ ಕ್ರಾಂತಿ ಆಗುತ್ತದೆ ಎಂದು ಸಚಿವ ರಾಜಣ್ಣ ಹೇಳಿದ್ದಾರೆ. ಕ್ರಾಂತಿ ಎಂದರೆ ಅದು ಮುಖ್ಯಮಂತ್ರಿ ಬದಲಾವಣೆ ಎಂದರ್ಥವಾ? ಯಾಕೆ ಎಲ್ಲವನ್ನೂ ಸಿ.ಎಂ ವಿಚಾರಕ್ಕೆ ಸೀಮಿತವಾಗಿ ನೋಡುತ್ತೀರಿ? ಬೇರೆ ವಿಷಯದಲ್ಲಿ ಕ್ರಾಂತಿ ಆಗಬಹುದು. ಅದೇನು ಎಂಬುದನ್ನು ಹೇಳಿದವರನ್ನೇ ಕೇಳಬೇಕು ಎಂದು ಪ್ರತಿಕ್ರಿಯಿಸಿದರು.
ಕಾಂಗ್ರೆಸ್ನಲ್ಲಿ ಮಾಸ್ಲೀಡರ್ ಆಗಿರುವ ಸಿದ್ದರಾಮಯ್ಯ ಅವರನ್ನು ನೈತಿಕವಾಗಿ ಕುಗ್ಗಿಸಿದರೆ ಪಕ್ಷಕ್ಕೆ ಹಿನ್ನಡೆಯಾಗುತ್ತದೆ ಎಂಬ ಕಾರಣಕ್ಕೆ ವಿರೋಧಪಕ್ಷದವರು ಟಾರ್ಗೆಟ್ ಮಾಡುತ್ತಿರುತ್ತಾರೆ. ಅವೆಲ್ಲವನ್ನೂ ಮೀರಿ ನಾವು ನಿಲ್ಲುತ್ತಿದ್ದೇವೆ ಎಂದು ತಿಳಿಸಿದರು.
ಡಾ. ಪ್ರಮೀಳಾದೇವಿ ಬಿ.ಕೆ ೧೯೩೧-೩೨ರಲ್ಲಿ ಗಾಂಧಿಜಿಯವರು ಉಪ್ಪಿನ ಸತ್ಯಾಗ್ರಹದ ನಂತರ ರೌಂಡ್ ಟೇಬಲ್ ಮಾತುಕತೆಗಾಗಿ ಇಂಗ್ಲೆಂಡಿಗೆ ಹೋದರು. ಈ ವೇಳೆಗಾಗಲೆ…
ಚಾಮರಾಜನಗರ ಮೈಸೂರು ಜಿಯ ಒಂದು ಸಣ್ಣ ತಾಲ್ಲೂಕು ಕೇಂದ್ರವಾಗಿತ್ತು. ಸುಮಾರು ೯೦ ವರ್ಷಗಳ ಹಿಂದೆ ಸಣ್ಣ ಪಟ್ಟಣ. ೧೯೨೬ರಿಂದ ಇಲ್ಲಿಗೆ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ…
ನೃತ್ಯ ಮುಂತಾದವುಗಳಲ್ಲಿ ನಾನು ನಡೆಸಿದ ಪ್ರಯೋಗಗಳಿಂದ ನಾನು ಉಚ್ಚೃಂಖಲ ಪ್ರವೃತ್ತಿಯುಳ್ಳವನಾಗಿದ್ದನೆಂದು ಯಾರೂ ತಿಳಿಯಬಾರದು. ಅದರಲ್ಲಿಯೂ ವಿವೇಕದ ಅಂಶ ಇದ್ದಿತೆಂಬುದು ವಾಚಕರಿಗೆ…
ಮೈಸೂರು: ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಬಳಿಕ ಮೊದಲ ಬಾರಿಗೆ ನಾಳೆ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಪ್ರಧಾನಿ…
ಬೆಂಗಳೂರು: ರಾಜ್ಯದ ಹಿತ ಕಾಪಾಡೋಕೆ ನಾವಿದ್ದೀವಿ. ದಯವಿಟ್ಟು ಬಂದ್ ಕೈಬಿಡಬೇಕು ಎಂದು ಸಿಎಂ ಡಿ.ಕೆ.ಶಿವಕುಮಾರ್ ಸರ್ಕಾರದ ಪರವಾಗಿ ನಮ್ರತೆಯ ಮನವಿ…