ಮೈಸೂರು : ವಿಧಾನಸಭೆಯಲ್ಲಿ ಮೆಜಾರಿಟಿ ಇರುವ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ. ಆದರೆ ಅವರು ಜನ ಮತ್ತು ತಮ್ಮದೆ ಪಕ್ಷದ ಶಾಸಕರ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ರವಿ ಹೇಳಿದರು.
ನಗರದಲ್ಲಿ ಮಾಧ್ಯಮಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಹಣದ ದುರುಪಯೋಗ ಅವ್ಯಾಹತ್ವಾಗಿ ನಡೆದಿದೆ. ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಸಿದ್ದರಾಮಯ್ಯ ಇಂಧನ ಬೆಲೆ ಏರಿಕೆಯು ಬೇರೆ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುವುದಕ್ಕೆ ಪರವಾನಿಗೆ ಕೊಟ್ಟಂತೆ ಎನ್ನುತ್ತಿದ್ದವರು ೨ನೇ ಬಾರಿ ಸಿಎಂ ಆದ ಬಳಿಕ ಇಂಧನ ಮೇಲಿನ ಸೆಸ್ ಅನ್ನು ೨ ಬಾರಿ ಹೆಚ್ಚಿಸಿದ್ದಾರೆ ಎಂದು ಕಿಡಿಕಾರಿದರು. ಅಲ್ಲದೆ ಮುಖ್ಯಮಂತ್ರಿಯಾದ ಬಳಿಕ ನೋಂದಣಿ ಶುಲ್ಕ ಹೆಚ್ಚಾಗಿದೆ. ವಾಹನ ನೋಂದಣಿ ಶುಲ್ಕ ಜಾಸ್ತಿಯಾಗಿದೆ. ಹಾಲಿನ ದರ ಏರಿಕೆ ಆಗಿದೆ. ನೀರಿನ ದರ ಏರಿಸುವ ಸಾಧ್ಯತೆಯೂ ಇದೆಯಂತೆ ಎಂದು ಎಂದರು.
ಹಾಲು ಉತ್ಪಾದಕರಿಗೆ ನೀಡುವ ಸಬ್ಸಿಡಿಯನ್ನು ಸರ್ಕಾರ ಕಳೆದ ೮ ತಿಂಗಳಿಂದ ಬಾಕಿ ಉಳಿಸಿಕೊಂಡಿದೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಬೇರೆ ಕೆಲಸಗಳಿಗೆ ದುರುಪಯೋಗವಾಗುತ್ತಿದೆ. ವಾಲ್ಮೀಕಿ ನಿಗಮದ ದುರ್ಬಳಕೆಯಾದ ೧೮೭ ಕೋಟಿಯಲ್ಲಿ ಕೇವಲ ೧೫ ಕೋಟಿ ರಿಕವರಿ ಆಗಿದೆ. ಅದರಲ್ಲಿ ತೆಲಂಗಣಾ ವಿಧಾನಸಭಾ ಚುನಾವಣೆಗೆ ಎಷ್ಟು ಹಣ ಹೋಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಬೇಕು ಎಂದು ಕೇಳಿದರು.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…