ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದೆ. ಇಂದು ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿ ಪಿ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಕೇಂದ್ರ ಸಚಿವ ಭಾರಿ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಕೇಂದ್ರ ರೇಷ್ಮೆ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ “ಕೇಂದ್ರ ರೇಷ್ಮೆ ಮಂಡಳಿಯ ಪ್ಲಾಟಿನಮ್ ಜುಬಿಲಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ದೇಶದ 27 ರಾಜ್ಯಗಳ ರೈತರು ತಮ್ಮನ್ನು ರೇಷ್ಮೆ ಕೃಷಿಯಲ್ಲಿ ತೊಡಗಿಸಿಕೊಂಡು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿಯೂ ರೇಷ್ಮೆ ಬೆಳೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ಮೈಸೂರು ಭಾಗದಲ್ಲಿ ಅಭಿವೃದ್ಧಿ ಹೊಂದಲು ಮೈಸೂರು ಅರಸರ ಕೊಡುಗೆ ಹೆಚ್ಚಿದೆ ಎಂದರು.
ನೆರೆಯ ಚೀನಾದಲ್ಲಿ ಹೆಚ್ಚಿನ ರೇಷ್ಮೆ ಬೆಳೆಯುತ್ತಿದ್ದು, ಮುಂದಿನ ದಿನಗಳಲ್ಲಿ ಭಾರತವು ಹೆಚ್ಚಿನ ರೇಷ್ಮೆ ಬೆಳೆದು, ಬೆಲೆಯಲ್ಲಿ ಪ್ರಥಮ ಸ್ಥಾನ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರೇಷ್ಮೆ ಬೆಳೆಗೆ ಕಳೆದ ಎರಡು ಮೂರು ವರ್ಷಗಳಿಂದ ಉತ್ತಮವಾದ ಬೆಲೆ ಸಿಗುತ್ತಿದ್ದು, ರೇಷ್ಮೆ ಬೆಳೆಗಾರರು ಅಭಿವೃದ್ಧಿ ಹೊಂದಲು ಸಾಧ್ಯವಾಗಿದೆ. ಕೇಂದ್ರ ಸರ್ಕಾರವು 1.52 ಲಕ್ಷ ಕೋಟಿ ಹಣವನ್ನು ಕೃಷಿ ಕ್ಷೇತ್ರಕ್ಕೆ ನೀಡಲಾಗಿದೆ. ಪ್ರತಿ ಕ್ಯಾಬಿನೆಟ್ ಸಭೆಯಲ್ಲಿ ರೈತರ ಅಭಿವೃದ್ಧಿಗೆ ಸಂಬಂದಿಸಿದ ಚರ್ಚೆಗಳು ನಡೆಯುತ್ತವೆ. ರೈತರ ಕಲ್ಯಾಣಕ್ಕೆ ಕೇಂದ್ರ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ. ರೈತರು ಆತ್ಮ ವಿಶ್ವಾಸದಿಂದ ಜೀವನ ನಡೆಸಬೇಕು ಎಂದು ಹೇಳಿದರು.
ಶ್ಯಾಮ್ ಪ್ರಕಾಶ್ ಮುಖರ್ಜಿ ಅವರ ದೂರ ದೃಷ್ಟಿಯಿಂದ ಕೇಂದ್ರೀಯ ರೇಷ್ಮೆ ಮಂಡಳಿ ಪ್ರಾರಂಭವಾಯಿತು. ಈ ಮಂಡಳಿಯ ಪ್ರಾರಂಭದಿಂದ ರೇಷ್ಮೆ ಬೆಲೆಯಲ್ಲಿ ಹಲವು ಆವಿಷ್ಕಾರ ಆಗಿದೆ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…