ಮೈಸೂರು

2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥ ; ಶಾಸಕ ಹರ್ಷವರ್ಧನ್ ಚಾಲನೆ

 ನಂಜನಗೂಡು : ಪಟ್ಟಣದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ಳಿರಥ ನಿರ್ಮಾಣಕ್ಕೆ ಶಾಸಕ ಬಿ. ಹರ್ಷವರ್ಧನ್ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಬಳಿಕ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಿ ರಥ ಮತ್ತು 75 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ರಥ ಸೇವೆಯ ಪರಿಕಲ್ಪನೆಯನ್ನು ಮೂರು ವರ್ಷಗಳ ನಂತರ ಇಂದು ನಾನು ಕಾರ್ಯರೂಪಕ್ಕೆ ತರುತ್ತಿದ್ದೇನೆ. ಸುಮಾರು 2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥವನ್ನು ನಿರ್ಮಾಣ ಮಾಡಲಾಗುತ್ತದೆ. 16 ಅಡಿ ಎತ್ತರ, 6 ಅಡಿ ಅಗಲದ ಬೆಳ್ಳಿರಥವನ್ನು 8 ತಿಂಗಳಲ್ಲಿ ಮಾಡಿ ಮುಗಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರಬೇಕಿತ್ತು, ಆದರೆ ಪಕ್ಷದ ಕಾರ್ಯಕ್ರಮ ಇರುವುದರಿಂದ ಅವರು ಬಂದಿಲ್ಲ. ಅದಕ್ಕೆ ತಡ ಮಾಡುವುದು ಬೇಡ ಎಂದು ಜನರಿಗೆ ಕೊಟ್ಟ ಭರವಸೆಯಂತೆ ನಾನು ಇಂದು ಬೆಳ್ಳಿರಥ ನಿರ್ಮಾಣಕ್ಕೆ ಚಾಲನೆ ನೀಡಿದ್ದೇನೆ ಎಂದು ತಿಳಿಸಿದರು.

andolana

Recent Posts

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

38 mins ago

ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನ ಉದ್ಘಾಟನೆ : ಸಾವಿರಾರು ಮಂದಿ ದರ್ಶನ, ಕೊಂಡೋತ್ಸವದಲ್ಲಿ ಭಕ್ತಿಪರವಶ

ಮೈಸೂರು : ತಾಲ್ಲೂಕಿನ ಜಯಪುರ ಹೋಬಳಿಯ ಮಂಡನಹಳ್ಳಿ ಗ್ರಾಮದಲ್ಲಿ ನವೀಕರಣಗೊಂಡ ಜೋಡಿಲಿಂಗ ಶ್ರೀ ಮಹದೇಶ್ವರ ದೇವಸ್ಥಾನದ ಉದ್ಘಾಟನಾ ಸಮಾರಂಭವು ಭಕ್ತಿಯ…

1 hour ago

ಬೆಂಗಳೂರು | ಮಾಂಜಾ ದಾರಕ್ಕೆ ಸಿಲುಕಿ ಬೈಕ್‌ ಸವಾರ ಸಾವು

ಬೆಂಗಳೂರು : ಬೀದರ್‌ನಲ್ಲಿ ಗಾಳಿ ಪಟ ಹಾರಿಸಲು ಬಳಸಿದ್ದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದ ಪ್ರಕರಣಕ್ಕೆ…

1 hour ago

ಕೇಂದ್ರ ಬಜೆಟ್‌ ದೇಶದ ಅಭಿವೃದ್ಧಿಗೆ ಪೂರಕ : ಡಾ. ಸಿ.ಎನ್.ಅಶ್ವತ್ಥ ನಾರಾಯಣ

ಮಂಡ್ಯ : ಆಡಳಿತದಲ್ಲಿ ಸುಧಾರಣೆಗೆ ಹೆಚ್ಚಿನ ಒತ್ತು ನೀಡಿ ಸ್ವಾವಲಂಬಿ ಮತ್ತು ಆತ್ಮನಿರ್ಭರ ಭಾರತ ಗುರಿಯಾಗಿಸಿಕೊಂಡು ಉದ್ಯೋಗ, ಕೃಷಿ ಉತ್ಪಾದನೆ,…

2 hours ago

ನಂಜನಗೂಡು ದೊಡ್ಡ ಜಾತ್ರೆಗೆ ಸಿದ್ಧತೆ : ಭಕ್ತರ ಸೌಕರ್ಯಕ್ಕೆ ಶಾಸಕ ದರ್ಶನ್ ಧ್ರುವನಾರಾಯಣ್ ಸೂಚನೆ

ನಂಜನಗೂಡು : ಮಾರ್ಚ್‌ 30 ರಂದು ನಡೆಯುವ ಶ್ರೀಕಂಠೇಶ್ವರ ದೇವಾಲಯದ ದೊಡ್ಡ ಜಾತ್ರೆಗೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ…

2 hours ago

ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪನೆ ; ಪರಿಶೀಲಿಸಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಹರಿಹರ : ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾನಿಲಯ ಸ್ಥಾಪಿಸಲು ಬೇಡಿಕೆಯಿದ್ದು ಅದನ್ನು ಪರಿಶೀಲಿಸಿ ಸರ್ಕಾರ ತೀರ್ಮಾನ ಮಾಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago