ಮೈಸೂರು

2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥ ; ಶಾಸಕ ಹರ್ಷವರ್ಧನ್ ಚಾಲನೆ

 ನಂಜನಗೂಡು : ಪಟ್ಟಣದ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಬೆಳ್ಳಿರಥ ನಿರ್ಮಾಣಕ್ಕೆ ಶಾಸಕ ಬಿ. ಹರ್ಷವರ್ಧನ್ ಪೂಜೆಯನ್ನು ನೆರವೇರಿಸಿದರು. ದೇವಾಲಯದ ಆಗಮಿಕ ನಾಗಚಂದ್ರ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು.

ಬಳಿಕ ಶಾಸಕ ಬಿ.ಹರ್ಷವರ್ಧನ್ ಮಾತನಾಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಬೆಳ್ಳಿ ರಥ ಮತ್ತು 75 ಕೊಠಡಿಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಿದ್ದರು. ರಥ ಸೇವೆಯ ಪರಿಕಲ್ಪನೆಯನ್ನು ಮೂರು ವರ್ಷಗಳ ನಂತರ ಇಂದು ನಾನು ಕಾರ್ಯರೂಪಕ್ಕೆ ತರುತ್ತಿದ್ದೇನೆ. ಸುಮಾರು 2.90 ಕೋಟಿ ರೂ. ವೆಚ್ಚದಲ್ಲಿ ಬೆಳ್ಳಿ ರಥವನ್ನು ನಿರ್ಮಾಣ ಮಾಡಲಾಗುತ್ತದೆ. 16 ಅಡಿ ಎತ್ತರ, 6 ಅಡಿ ಅಗಲದ ಬೆಳ್ಳಿರಥವನ್ನು 8 ತಿಂಗಳಲ್ಲಿ ಮಾಡಿ ಮುಗಿಸುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬರಬೇಕಿತ್ತು, ಆದರೆ ಪಕ್ಷದ ಕಾರ್ಯಕ್ರಮ ಇರುವುದರಿಂದ ಅವರು ಬಂದಿಲ್ಲ. ಅದಕ್ಕೆ ತಡ ಮಾಡುವುದು ಬೇಡ ಎಂದು ಜನರಿಗೆ ಕೊಟ್ಟ ಭರವಸೆಯಂತೆ ನಾನು ಇಂದು ಬೆಳ್ಳಿರಥ ನಿರ್ಮಾಣಕ್ಕೆ ಚಾಲನೆ ನೀಡಿದ್ದೇನೆ ಎಂದು ತಿಳಿಸಿದರು.

andolana

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

32 mins ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

2 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

3 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

5 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

11 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

17 hours ago