ಮೈಸೂರು

ಎಸ್‌ಐಟಿ ಸೂಕ್ತ ರೀತಿಯಲ್ಲಿ ತನಿಖೆ ನಡೆಸುತ್ತಿಲ್ಲ: ಎಚ್‌ಡಿ ಕುಮಾರಸ್ವಾಮಿ

ಮೈಸೂರು: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅನವಶ್ಯಕವಾಗಿ ಬೇರೆಯವರನ್ನು ಬಂಧಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ದೂರಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಎರಡು ಭಾಗಗಳಿದೆ. ಒಂದು ವಿಡಿಯೋ ಮಾಡಿಕೊಂಡವನು ಇನ್ನೊಂದು ವಿಡಿಯೋ ಹರಿಯಬಿಟ್ಟವನು. ಇದೊಂದು ಘೋರ ಅಪರಾಧ. ಎಸ್‌ಐಟಿ ಈವರೆಗೆ ವಿಡಿಯೋ ವೈರಲ್‌ ಮಾಡಿದವರನ್ನು ಬಂಧಿಸುವಲ್ಲಿ ವಿಫಲವಾಗಿದೆ. ಆರೋಪಿ ಖಾಸಗಿ ಚಾನೆಲ್‌ಗೆ ಸಂದರ್ಶನ ನೀಡುತ್ತಾರೆ. ಆದರೆ ಅವರು ಎಸ್‌ಐಟಿ ಕೈಗೆ ಸಿಗುವುದಿಲ್ಲ ಎಂದರೆ ಏನರ್ಥ ಎಂದು ಪ್ರಶ್ನಿಸಿದರು.

ಪ್ರಜ್ವಲ್‌ ವಿದೇಶದಲ್ಲಿರುವ ಬಗ್ಗೆ ಮಾತನಾಡಿ, ಪ್ರಜ್ವಲ್‌ ಪಕ್ಷದಲ್ಲಿದ್ದಾಗಲೇ ನಮ್ಮ ಕೈಗೆ ಹಾಗೂ ಕಾರ್ಯರ್ತರ ಕೈಗೆ ಸಿಗುತ್ತಿರಲಿಲ್ಲ. ಇನ್ನು ವಿದೇಶದಲ್ಲಿರುವುದಾಗ ಹೇಗೆ ಸಿಗುತ್ತಾನೆ ಎಂದು ಕಿಡಿಕಾರಿದರು.

ಇನ್ನು ದೇವರಾಜೇಗೌಡ ಪ್ರಕರಣಕ್ಕೆ ಸಂಬಂಧಿಸಿದಂತೆಯೂ ಮಾತನಾಡಿದ ಎಚ್‌ಡಿಕೆ ಎಸ್‌ಐಟಿ ದೇವರಾಜೇಗೌಡರನ್ನು ಯಾಕೆ ಬಂಧಿಸಿದ್ದಾರೆ. ಅವರಿಂದ ಯಾವ ಮಾಹಿತಿ ಬೇಕಿದೆ ಎಂದು ಬಂಧಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ವಿಡಿಯೋ ವೈರಲ್‌ ಪ್ರಕರಣವಾ? ಅತ್ಯಾಚಾರ ಮಾಹಿತಿ ಸಂಬಂಧವಾ? ಅಥವಾ ಆಡಿಯೋ ವೈರಲ್‌ ಮಾಹಿತಿ ಸಂಬಂಧ ವಿಚಾರಣೆಗಾಗಿ ಬಂಧಿಸಿದ್ದಾರೆಯೇ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

4 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

4 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

5 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

5 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

6 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

6 hours ago