ಮೈಸೂರು : ಮತದಾನದ ದಿನ ರಜೆಯ ದಿನ ಅಲ್ಲ… ಅಂದು ಪ್ರವಾಸವನ್ನು ಕೈಗೊಳ್ಳದೆ ಜವಾಬ್ದಾರಿಯುತ ನಾಗರಿಕರಾಗಿ ಸಂವಿಧಾನಿಕ ಹಕ್ಕನ್ನು ಚಲಾಯಿಸುವಂತೆ ನಂಜನಗೂಡು ತಾಲ್ಲೂಕು ಸ್ವೀಪ್ ಸಮಿತಿ ಸಾರ್ವಜನಿಕರಿಗೆ ಅರಿವು ಮೂಡಿಸಿತು.
ಲೋಕಸಭಾ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ತಾಲ್ಲೂಕು ಪಂಚಾಯಿತಿ ಸ್ವೀಪ್ ಸಮಿತಿ ವತಿಯಿಂದ ನಿತ್ಯ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದು, ಇಂದು ನಗರದ ರೈಲ್ವೆ ನಿಲ್ದಾಣ ಹಾಗೂ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಏಪ್ರಿಲ್ 26 ರಂದು ಪ್ರವಾಸ ಕೈಗೊಳ್ಳದೆ ತಪ್ಪದೆ ಮತದಾನ ಮಾಡುವಂತೆ ತಿಳಿಸಿದೆ.
ಹೆಚ್ಚು ಜನಸಂದಣಿ ಇರುವ ಬಸ್ ನಿಲ್ದಾಣದಲ್ಲಿ ತಮ್ಮ ತಮ್ಮ ಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಹಿರಿಯರು, ಕಾಲೇಜು ಯುವಕ- ಯುವತಿಯರು ಸೇರಿದಂತೆ ಎಲ್ಲಾ ವಯೋಮಾನದವರಿಗೆ ಸಮೃದ್ಧ ಮತ್ತು ಸದೃಢ ದೇಶ ಕಟ್ಟಲು ಪ್ರತಿಯೊಬ್ಬರ ಮತವು ಅತ್ಯಮೂಲ್ಯ ಎಂಬುದನ್ನು ಮನದಟ್ಟು ಮಾಡಲಾಯಿತು.
ಇನ್ನೊಂದೆಡೆ ರೈಲು ನಿಲ್ದಾಣದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಜಾಗೃತ ಹಾಡು, ಘೋಷವಾಕ್ಯಗಳನ್ನು ಕೇಳಿಸಿ, ಮತದಾನ ದಿನ ರಜೆ ಎಂದು ಭಾವಿಸದೆ ಮತ ಹಾಕುವ ಮೂಲಕ ಚುನಾವಣಾ ಹಬ್ಬವನ್ನು ಆಚರಿಸುವಂತೆ ಕರೆ ನೀಡಲಾಯಿತು.
ಈ ವೇಳೆ ತಾಲ್ಲೂಕು ಸ್ವೀಪ್ ಸಮಿತಿಯ ದಿನೇಶ್, ಬಸವರಾಜು, ರವಿ ಹಾಗೂ ಕಾವ್ಯ ಸೇರಿ ಇತರೆ ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…
ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…
ಬೆಂಗಳೂರು : ಹೈಕಮಾಂಡ್ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…
ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…
ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…
ಬೆಂಗಳೂರು: ಬ್ರೇಕ್ಫಾಸ್ಟ್ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…